ಒನ್‌ವೇಲಿ ಬಂದ ಬೈಕ್ ಸವಾರ: ತಡೆದಿದ್ದಕ್ಕೆ ಅವಾಚ್ಯ ಶಬ್ದಗಳಿಂದ ಕಾನ್ಸ್‌ಟೇಬಲ್​ಗೆ ನಿಂದನೆ​​

Updated on: Jun 13, 2023 | 10:53 PM

ಒನ್‌ವೇನಲ್ಲಿ ಬಂದಿದ್ದ ಬೈಕ್ ಸವಾರನನ್ನು ಕಾನ್ಸ್‌ಟೇಬಲ್​ ತಡೆದಿದ್ದಕ್ಕೆ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿರುವಂತಹ ಘಟನೆ ನಗರದ ಹೆಚ್‌ಎಎಲ್‌ನ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ.

ಬೆಂಗಳೂರು: ಒನ್‌ವೇನಲ್ಲಿ ಬಂದಿದ್ದ ಬೈಕ್ ಸವಾರನನ್ನು ಕಾನ್ಸ್‌ಟೇಬಲ್​ (Constable) ತಡೆದಿದ್ದಕ್ಕೆ ಸವಾರ ಅವಾಚ್ಯ ಶಬ್ದಗಳಿಂದ ನಿಂದಿಸಿರುವಂತಹ ಘಟನೆ ನಗರದ ಹೆಚ್‌ಎಎಲ್‌ನ ಖಾಸಗಿ ಆಸ್ಪತ್ರೆಯ ಮುಂಭಾಗದಲ್ಲಿ ನಡೆದಿದೆ. ಇತರೆ ವಾಹನ ಸವಾರರು ವಿಡಿಯೋ ಸೆರೆ ಹಿಡಿದಿದ್ದು, ಸದ್ಯ ಎಲ್ಲೆಡೆ ವೈರಲ್​ ಆಗಿದೆ. ತೆರೆಗೆ ಕಟ್ಟುತ್ತೇನೆ ಎಂದು ಹೇಳಿ ಬೈಕ್​ ಸವಾರ ದರ್ಪ ಮೆರೆದಿದ್ದಾರೆ. ನಡುರಸ್ತೆಯಲ್ಲಿ ಬೈಕ್‌ ನಿಲ್ಲಿಸಿ ಸಂಚಾರಕ್ಕೂ ತೊಂದರೆ ಕೊಟ್ಟಿದ್ದಾನೆ. ಹೆಚ್‌ಎಎಲ್‌ ಠಾಣೆಗೆ ಸಂಚಾರಿ ಪೊಲೀಸ್‌ ಕಾನ್ಸ್‌ಟೇಬಲ್‌ ದೂರು ನೀಡಿದ್ದು, ಸವಾರನನ್ನು ವಶಕ್ಕೆ ಪಡೆದು ಬೈಕ್‌ ಸೀಜ್ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More