ಕೊಲ್ಹಾಪುರ: ಮುಳುಗಡೆಗೊಂಡಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವ ಬೈಕ್ ಸವಾರರು

ಕೊಲ್ಹಾಪುರ: ಮುಳುಗಡೆಗೊಂಡಿರುವ ಸೇತುವೆ ಮೇಲೆ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿರುವ ಬೈಕ್ ಸವಾರರು
|

Updated on: Jul 02, 2024 | 12:00 PM

ಪಂಚಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಮೇಲೆ ಹರಿಯುತ್ತಿರುವ ನೀರು ದೂರದಿಂದ ನೋಡಿದರೆ ನಿಧಾನಕ್ಕೆ ಚಲಿಸುತ್ತಿರುವಂತೆ ಭಾಸವಾಗುತ್ತದೆ ಅದರೆ ನೀರಿನ ಸೆಳತ ಜೋರಾಗಿರುತ್ತದೆ. ಜನ ನೀರಿನ ಹರಿವನ್ನು ಅಂಡರ್ ಎಸ್ಟಿಮೇಟ್ ಮಾಡಿ ರಿಸ್ಕ್ ತೆಗೆದುಕೊಳ್ಳಲು ಮುಂದಾಗುತ್ತಾರೆ. ಜನ ಎಚ್ಚರ ವಹಿಸಬೇಕೆನ್ನುವುದೇ ನಮ್ಮ ಆಶಯ.

ಬೆಳಗಾವಿ: ಜೀವದೊಂದಿಗೆ ಚೆಲ್ಲಾಟವೆಂದರೆ ಇದೇ ಇರಬೇಕು. ದೃಶ್ಯಗಳಲ್ಲಿ ಕಾಣುತ್ತಿರುವ ಬ್ರಿಡ್ಜ್-ಕಮ್- ಬ್ಯಾರೇಜ್ ಸರಳ ಭಾಷೆಯಲ್ಲಿ ಹೇಳುವುದಾದರೆ ಸೇತುವೆಯು ಮುಳುಗಡೆಯಾಗಿದೆ ಮತ್ತು ನೀರು ಸೇತುವೆ ಮೇಲಿಂದ ಹರಿಯುತ್ತಿದೆ. ಆದರೆ ಕೆಲ ದ್ವಿಚಕ್ರ ವಾಹನ ಸವಾರರು ಮುಳುಗಡೆಯಾಗಿರುವ ಸೇತುವೆ ಮೇಲೆ ಒಂದು ಬದಿಯಿಂದ ಮತ್ತೊಂದು ಬದಿಗೆ ಹೋಗುತ್ತಿದ್ದಾರೆ. ಇದು ಹುಚ್ಚಾಟ ಮತ್ತು ಮೂರ್ಖತನದ ಪ್ರದರ್ಶನ. ನೆರೆರಾಜ್ಯ ಮಹಾರಾಷ್ಟ್ರ ಕೊಲ್ಹಾಪುರ ಜಿಲ್ಲೆಯ ಶಿಂಗನಾಪುರದಲ್ಲಿ ಕಂಡು ಬಂದ ದೃಶ್ಯವಿದು. ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಒಂದೇ ಸಮ ಸುರಿಯುತ್ತದೆ ಮತ್ತು ಅದರ ಪರಿಣಾಮವಾಗಿ ಪಂಚಗಂಗಾ ನದಿ ಉಕ್ಕಿ ಹರಿಯುತ್ತಿದೆ. ಶಿಂಗನಾಪುರ ಬಳಿ ಪಂಚಗಂಗಾ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಜಲಾವೃತಗೊಂಡಿದ್ದರೂ ಜನ ರಿಸ್ಕ್ ತೆಗೆದುಕೊಂಡು ರಭಸದಿಂದ ನೀರು ಹರಿಯುತ್ತಿರುವ ಸೇತುವೆ ಮೇಲೆ ಬೈಕ್ ಗಳನ್ನು ಓಡಿಸಿಕೊಂಡು ಹೋಗುತ್ತಿದ್ದಾರೆ. ಹೀಗೆ ರಿಸ್ಕ್ ತೆಗೆದುಕೊಂಡ ಜನ ಅಪಾಯಕ್ಕೀಡಾದ, ನದಿ ನೀರಲ್ಲಿ ವಾಹನದ ಜೊತೆ ಕೊಚ್ಚಿಕೊಂಡು ಹೋದ ಅನೇಕ ಉದಾಹರಣೆಗಳು ನಮ್ಮ ಮುಂದಿವೆ, ಆದರೂ ಜನ ತಿಳುವಳಿಕೆ ಪ್ರದರ್ಶಿಸಲಾರರು.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಉತ್ತರ ಕನ್ನಡ: ಧಾರಾಕಾರ ಮಳೆಗೆ ಗಂಗಾವಳಿ ನದಿ ಸೇತುವೆ ಮುಳುಗಡೆ, ಐದಕ್ಕೂ ಹೆಚ್ಚು ಗ್ರಾಮಗಳ ಸಂಪರ್ಕ ಕಷ್ಟ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ