Protest at Freedom Park: ಆಟೋರಿಕ್ಷಾ ಚಾಲಕರಿಂದ ದೈಹಿಕ ಹಲ್ಲೆ ನಡೆಯುತ್ತಿದೆ ಎಂದು ಬೈಕ್ ಟ್ಯಾಕ್ಸಿ ಸಂಘದ ಪದಾಧಿಕಾರಿಗಳ ಅರೋಪ

Updated on: Mar 27, 2023 | 1:01 PM

ನಮ್ಮಿಂದ ಯಾವುದೇ ಪ್ರಮಾದವಾಗದಿದ್ದರೂ, ನಮ್ಮ ಪಾಡಿಗೆ ನಾವು ಕೆಲಸ ಮಾಡಿಕೊಂಡಿದ್ದರೂ ನಮ್ಮ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಬೈಕ್ ಟ್ಯಾಕ್ಸಿ ಸಂಘದ ಪದಾಧಿಕಾರಿಯೊಬ್ಬರು ಹೇಳುತ್ತಾರೆ.

ಬೆಂಗಳೂರು: ಬೈಕ್ ಟ್ಯಾಕ್ಸಿಗಳಿಂದಾಗಿ ನಮ್ಮ ಸಂಪಾದನೆ ಕಡಿಮೆಯಾಗುತ್ತಿದೆ, ಬದುಕು ನಡೆಸುವುದು ದುಸ್ತರವಾಗುತ್ತಿದೆ ಎಂದು ಆಟೋರಿಕ್ಷಾ ಚಾಲಕರು (auto rickshaw drivers) ಪ್ರತಿಭಟನೆ ನಡೆಸುತ್ತಾರೆ. ಆದರೆ ಆಟೋ ಚಾಲಕರಿಂದ ನಮ್ಮ ಮೇಲೆ ದೌರ್ಜನ್ಯ ನಡೆಯುತ್ತಿದೆ, ಅವರು ನಮ್ಮ ಮೇಲೆ ದೈಹಿಕ ಹಲ್ಲೆ ನಡೆಸುತ್ತಾರೆ ಎಂದು ಅವರ ವಿರುದ್ಧ ಬೈಕ್ ಟ್ಯಾಕ್ಸಿ ಚಾಲಕರು ನಗರದ ಫ್ರೀಡಂ ಪಾರ್ಕ್ ನಲ್ಲಿ (Freedom Park) ಪ್ರತಿಭಟನೆ ನಡೆಸುತ್ತಿದ್ದಾರೆ. ನಮ್ಮಿಂದ ಯಾವುದೇ ಪ್ರಮಾದವಾಗದಿದ್ದರೂ, ನಮ್ಮ ಪಾಡಿಗೆ ನಾವು ಕೆಲಸ ಮಾಡಿಕೊಂಡಿದ್ದರೂ ನಮ್ಮ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ಬೈಕ್ ಟ್ಯಾಕ್ಸಿ ಸಂಘದ ಪದಾಧಿಕಾರಿಯೊಬ್ಬರು (office-bearer) ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 27, 2023 01:01 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More