Udupi News: ಶಿರ್ವದಲ್ಲಿ ಕಾಡುಕೋಣಗಳ ಹಿಂಡು ಪತ್ತೆ, ನಾಶವಾಗುತ್ತಿವೆ ಬೆಳೆಗಳು
ಉಡುಪಿ ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ಕಾಡುಕೋಣಗಳು ಪತ್ತೆಯಾಗಿವೆ. ಕಾಡುಕೋಣಗಳ ಹಿಂಡು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶ ಮಾಡುತ್ತಿವೆ.
ಉಡುಪಿ, ಜುಲೈ 30: ಜಿಲ್ಲೆಯ ಶಿರ್ವ ಸಮೀಪದ ಪಿಲಾರು ಕುಂಜಿಗುಡ್ಡೆಯ ಪೆರ್ಗೊಟ್ಟು ಎಂಬಲ್ಲಿ ರವಿ ಕುಲಾಲ್ ಎಂಬುವವರಿಗೆ ಸೇರಿದ ಮನೆಯ ವರಾಂಡದಲ್ಲಿ ಕಾಡುಕೋಣಗಳು (Bison) ಪತ್ತೆಯಾಗಿವೆ. ಮನೆಯ ಸುತ್ತಲೂ ತಿರುಗಿ ಬಾವಿ ಬಳಿ ತೆರಳಿ ನಂತರ ಕಾಡಿಗೆ ನುಗ್ಗಿವೆ. ಪಿಲಾರುಕಾನ ಮೀಸಲು ಅರಣ್ಯದ ಸುತ್ತ ಮುಳ್ಳುತಂತಿ ಬೇಲಿ ಇದ್ದರೂ ಕೆಲವೊಮ್ಮೆ ಕಾಡುಕೋಣಗಳ ಹಿಂಡು ಮೀಸಲು ಅರಣ್ಯದ ಅಂಚಿನಲ್ಲಿರುವ ಸೂಡ, ಪಿಲಾರು, ಮಜಲಬೆಟ್ಟು, ಮಿತ್ತಬೀಟು, ಕುದುರೆಬೆಟ್ಟು ಮತ್ತು ಗುಂಡುಪಾದೆ ಪ್ರದೇಶಗಳಲ್ಲಿನ ಕೃಷಿ ಜಮೀನುಗಳಿಗೆ ನುಗ್ಗಿ ಭತ್ತ, ತರಕಾರಿ, ಬಾಳೆ ಮತ್ತು ಅಡಿಕೆ ಕೃಷಿಯನ್ನು ನಾಶಗೊಳಿಸುತ್ತಿವೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
