ಪ್ರಧಾನಿ ಮೋದಿಗಾಗಿ ಸುಳ್ಯದಲ್ಲಿ ಕೊರಗಜ್ಜನಿಗೆ ಹರಕೆ ತೀರಿಸಿದ ಬಿವೈ ವಿಜಯೇಂದ್ರ

Edited By:

Updated on: May 17, 2025 | 2:00 PM

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಬೇಕೆಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಜಯನಗರದ ಬಿಜೆಪಿ ಘಟಕ ಕೊರಗಜ್ಜನಿಗೆ ಹರಕೆ ಹೊತ್ತುಕೊಂಡಿತ್ತು. ಇದೀಗ ವಿಶೇಷ ನೇಮದ ಮೂಲಕ ಹರಕೆ ತೀರಿಸಲಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿಯಾದರು. ದಕ್ಷಿಣ ಕನ್ನಡ ಸಂಸದರ ಮೂಲಕ ಕೊರಗಜ್ಜನ ಪ್ರಸಾದವನ್ನು ಪ್ರಧಾನಿ ಮೋದಿಗೆ ತಲುಪಿಸಲಾಗುತ್ತದೆ ಎಂದು ಸುಳ್ಯ ಬಿಜೆಪಿ ತಿಳಿಸಿದೆ.

ಮಂಗಳೂರು, ಮೇ 17: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಕೋರಂಬಡ್ಕದಲ್ಲಿ ನಡೆದ ಕೊರಗಜ್ಜ ದೈವದ ವಿಶೇಷ ಹರಕೆ ನೇಮೋತ್ಸವದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭಾಗಿಯಾದರು. ಸುಳ್ಯ ಜಯನಗರದ ಶ್ರೀನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ ಶ್ರೀಗುಳಿಗ ದೈವ ಹಾಗೂ ಕೊರಗಜ್ಜ ದೈವಸ್ಥಾನದಲ್ಲಿ ವಿಶೇಷ ಹರಕೆಯ ಶ್ರೀಕೊರಗಜ್ಜ ದೈವದ ನೇಮ ಮತ್ತು ಪರಿವಾರ ದೈವಗಳ ತಂಬಿಲ ಸೇವೆ ಕಾರ್ಯಕ್ರಮ ನಡೆಯಿತು. ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗುವಂತೆ ಸಂಕಲ್ಪ ಮಾಡಿ ಬಿಜೆಪಿ ಜಯನಗರ ಬೂತ್ ಸಮಿತಿ ಹರಕೆ ಹೇಳಿತ್ತು. ಇದೀಗ ಬಿಜೆಪಿ ವತಿಯಿಂದ ಹರಕೆ ನೇಮೋತ್ಸವ ನಡೆದಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಭಾಗವಹಿಸಿ ಪ್ರಸಾದ ಸ್ವೀಕರಿಸಿದರು. ಈ ವೇಳೆ ಸಂಸದ ಬ್ರಿಜೇಶ್ ಚೌಟ, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸೇರಿ ಹಲವು ಮಂದಿ ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಸುಳ್ಯ ಬಿಜೆಪಿ ಘಟಕ ಸಂಸದ ಬ್ರಿಜೇಶ್ ಚೌಟ ಮೂಲಕ ಕೊರಗಜ್ಜ ದೈವದ ಪ್ರಸಾದವನ್ನು ಪ್ರಧಾನಿ ನರೇಂದ್ರ ಮೋದಿಗೆ ತಲುಪಿಸಲಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More