AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದಾದ ಸಾಧ್ಯತೆಯನ್ನೇ ರಾಜಣ್ಣ ಕ್ರಾಂತಿ ಎಂದಿರಬಹುದು: ಪಾಟೀಲ್

ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದಾದ ಸಾಧ್ಯತೆಯನ್ನೇ ರಾಜಣ್ಣ ಕ್ರಾಂತಿ ಎಂದಿರಬಹುದು: ಪಾಟೀಲ್

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 27, 2025 | 3:53 PM

Share

ಕೆಲವು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲು ಬಹಳ ಕಾತುರಾಗಿದ್ದಾರೆ, ಸೆಪ್ಟಂಬರ್ ನಲ್ಲಿ ಅವರು ಪಕ್ಷಕ್ಕೆ ಬರುವ ಕಾರ್ಯಕ್ರಮ ಇರಬಹುದು, ಅದನ್ನೇ ರಾಜಣ್ಣ ಅವರು ಸೆಪ್ಟಂಬರ್ ಕ್ರಾಂತಿ ಅಂತ ಹೇಳಿರಬಹುದು, ಅಂತ ಪಾಟೀಲ್ ಹೇಳಿದರು. ರಾಜಣ್ಣ ಯಾಕೆ ಹೇಳಿದ್ದಾರೋ ಯಾರಿಗೂ ಗೊತ್ತಿಲ್ಲ, ಎಲ್ಲರೂ ತಮಗೆ ತಿಳಿದಿದ್ದನ್ನು ಹೇಳುತ್ತಿದ್ದಾರೆ ಅಷ್ಟೇ.

ವಿಜಯಪುರ, ಜೂನ್ 27: ಸಹಕಾರ ಸಚಿವ ಕೆಎನ್ ರಾಜಣ್ಣ (KN Rajanna) ದೊಡ್ಡೋರು, ಅವರು ಯಾವ ಅರ್ಥದಲ್ಲಿ ಕ್ರಾಂತಿಯ ಮಾತುಗಳ್ನಾಡಿದ್ದಾರೋ ಗೊತ್ತಿಲ್ಲ, ಹಾಗಾಗಿ ಮಾತಿನ ಅರ್ಥವೇನು ಅನ್ನೋದನ್ನು ಅವರನ್ನೇ ಕೇಳೋದು ಒಳಿತು ಎಂದು ಸಚಿವ ಎಂಬಿ ಪಾಟೀಲ್ ಹೇಳಿದರು. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯಕ್ಕಾಗಿ ನಡೆದ ಕ್ರಾಂತಿಯಲ್ಲಿ ಮಾತ್ರ ಪಾಲ್ಗೊಂಡಿದೆ, ಹಾಗಾಗಿ ಆ ಕ್ರಾಂತಿ ಬಿಟ್ಟರೆ ವೇರೆ ಯಾವುದೇ ಕ್ರಾಂತಿಯ ಬಗ್ಗೆ ತನಗೆ ಗೊತ್ತಿಲ್ಲ. ಪಕ್ಷದಲ್ಲಿ, ನಾಯಕರಲ್ಲಿ ಏನಾದರೂ ಹೆಚ್ಚು ಕಡಿಮೆಯಾದರೆ ಅದನ್ನು ಬಗೆಹರಿಸಲು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇದ್ದಾರೆ ಹೈಕಮಾಂಡ್ ಇದೆ ಎಂದು ಪಾಟೀಲ್ ಹೇಳಿದರು.

ಇದನ್ನೂ ಓದಿ:  ಬೆಂಗಳೂರು-ವಿಜಯಪುರ ರೈಲು ಪ್ರಯಾಣ 15ರಿಂದ 10 ಗಂಟೆಗೆ ಇಳಿಕೆ: ಎಂಬಿ ಪಾಟೀಲ್ ಮಹತ್ವದ ಚರ್ಚೆ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More