ಬೆಳಗಾವಿಯಲ್ಲಿ ಪರಿವಾರವಾದ ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಪೋಸ್ಟರ್ ಅಭಿಯಾನ ಆರಂಭಿಸಿದ ಬಿಜೆಪಿ

Updated on: Mar 15, 2024 | 10:54 AM

ಕೇವಲ ಕಾಂಗ್ರೆಸ್ ಮಾತ್ರ ಅಲ್ಲ, ಪರಿವಾರವಾದವನ್ನು ಅನುಸರಿಸಿಕೊಂಡು ಬರುತ್ತಿರುವ ಸಮಾಜವಾದಿ ಪಕ್ಷ, ಎನ್ ಸಿಪಿ ಮತ್ತು ಶಿವಸೇನೆಯ (ಉದ್ಧವ್ ಬಣ) ಹೆಸರುಗಳನ್ನು ಸಹ ಪೋಸ್ಟರ್ ನಲ್ಲಿ ನೋಡಬಹುದು. ಪ್ರಾಯಶಃ ಪೋಸ್ಟರ್ ಅಭಿಯಾನ ಶುರುಮಾಡಿರುವ ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ರಾ ಜಾಧವ್ ಎನ್ನುವವರು ತನ್ನದು ಮೋದಿ ಕುಟುಂಬ ಎಂದು ಬರೆಸಿಕೊಂಡಿದ್ದಾರೆ.

ಬೆಳಗಾವಿ: ಲೋಜಸಭಾ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದಲ್ಲಿ ಪೋಸ್ಟರ್ ಅಭಿಯಾನಗಳು ಆರಂಭಗೊಂಡಿವೆ. ಬೆಳಗಾವಿ ಇದರ ಒಂದು ನಮೂನೆಯನ್ನು ನೋಡಬಹುದು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಮಗ ಮೃಣಾಲ್ ಹೆಬ್ಬಾಳ್ಕರ್​ ಗೆ (Mrinal Hebbalkar)ಎಐಸಿಸಿ ಬೆಳಗಾವಿ ಕ್ಷೇತ್ರದ ಟಿಕೆಟ್ ನೀಡುವುದು ಹೆಚ್ಚು ಕಡಿಮೆ ಖಚಿತವಾದಂತಿದೆ. ಇದೇ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಲಕ್ಷ್ಮಿಯವರ ಪರಿವಾರವಾದವನ್ನು (dynastic politics) ಅಣಕಿಸುವ ಪೋಸ್ಟರ್ ಗಳನ್ನು ಬೆಳಗಾವಿ ನಗರದಲ್ಲಿ ಅಂಟಿಸಲಾಗಿದೆ. ಲಕ್ಷ್ಮಿ ರಾಜ್ಯ ಸಚಿವ ಸಂಪುಟದಲ್ಲಿ ಸಚಿವೆ, ಸಹೋದರ ಚನ್ನರಾಜ್ ಹಟ್ಟಿಹೊಳಿ ವಿಧಾನ ಪರಿಷತ್ ಸದಸ್ಯನಾಗಿರುವಾಗ ಸಚಿವೆಯ ಮಗನೇ ಸಂಸದನಾದರೆ ಉಳಿದ ಕಾಂಗ್ರೆಸ್ ಕಾರ್ಯಕರ್ತರು ಭಜನೆ ಮಾಡಬೇಕಾ? ಎಂದು ಪೋಸ್ಟರ್ ನಲ್ಲಿ ಪ್ರಶ್ನಿಸಲಾಗಿದೆ. ಕೇವಲ ಕಾಂಗ್ರೆಸ್ ಮಾತ್ರ ಅಲ್ಲ, ಪರಿವಾರವಾದವನ್ನು ಅನುಸರಿಸಿಕೊಂಡು ಬರುತ್ತಿರುವ ಸಮಾಜವಾದಿ ಪಕ್ಷ, ಎನ್ ಸಿಪಿ ಮತ್ತು ಶಿವಸೇನೆಯ (ಉದ್ಧವ್ ಬಣ) ಹೆಸರುಗಳನ್ನು ಸಹ ಪೋಸ್ಟರ್ ನಲ್ಲಿ ನೋಡಬಹುದು. ಪ್ರಾಯಶಃ ಪೋಸ್ಟರ್ ಅಭಿಯಾನ ಶುರುಮಾಡಿರುವ ಬೆಳಗಾವಿ ಗ್ರಾಮೀಣ ಮಂಡಲದ ಅಧ್ಯಕ್ಷ ಧನಂಜಯ ರಾ ಜಾಧವ್ ಎನ್ನುವವರು ತನ್ನದು ಮೋದಿ ಕುಟುಂಬ ಎಂದು ಬರೆಸಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:       ಅಂಗನವಾಡಿ ಕಾರ್ಯಕರ್ತೆಯರು, ವಿಕಲಚೇತನರಿಗೆ ಮಹತ್ವದ ಭರವಸೆ ನೀಡಿದ ಸಿಎಂ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More