ಆಪರೇಶನ್ ಕಮಲ ನಡೆಸುವ ಮೂಲಕ ಮಾತ್ರ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Nov 11, 2024 | 10:22 AM

ಕೊರೋನಾ ಹಾವಳಿಯಲ್ಲಿ ರೂ. 335 ಗೆ ಸಿಗುತ್ತಿದ್ದ ಪಿಪಿಈ ಕಿಟ್ ಚೀನಾದಿಂದ ₹ 2147 ಕೊಟ್ಟು ಅಮದು ಮಾಡಿಕೊಂಡ ಯಡಿಯೂರಪ್ಪ, ಬಿ ಶ್ರೀರಾಮುಲು ಮತ್ತು ಡಾ ಕೆ ಸುಧಾಕರ್ ರಾಜ್ಯವನ್ನು ಲೂಟಿ ಹೊಡೆದರು. ಇವರ ಲೂಟಿಕೋರತನ ಹಾಗೂ ಬೇಜವಾಬ್ದಾರಿಯಿಂದ 50,000 ಕ್ಕೂ ಹೆಚ್ಚು ಜನ ಬಲಿಯಾದರು ಎಂದು ಸಿದ್ದರಾಮಯ್ಯ ಹೇಳಿದರು.

ಹಾವೇರಿ: ಶಿಗ್ಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಅಬ್ಬರದ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಯಾವತ್ತೂ ಬಹುಮತ ಪಡೆದು ಅಧಿಕಾರಕ್ಕೆ ಬಂದಿಲ್ಲ, 2008ರಲ್ಲಿ ಬಿಜೆಪಿಗೆ ಸಿಕ್ಕಿದ್ದು 110 ಸ್ಥಾನ ಮಾತ್ರ ಆದರೆ ಜನಾರ್ಧನರೆಡ್ಡಿ ಆಪರೇಶನ್ ಕಮಲ ನಡೆಸಿ ಬಿಎಸ್ ಯಡಿಯೂರಪ್ಪರನ್ನು ಮುಖ್ಯಮಂತ್ರಿ ಮಾಡಿದರು, ಹಾಗೆಯೇ 2018ರಲ್ಲಿ ಬಿಜೆಪಿಗೆ ದಕ್ಕಿದ್ದು 104 ಸೀಟು ಮಾತ್ರ, ಆಗಲೂ ಆಪರೇಶನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ವಕ್ಫ್ ಜಮೀನು ಒತ್ತುವರಿಯನ್ನು ತೆರವುಗೊಳಿಸುವ ಭರವಸೆಯ 2014ರ ಬಿಜೆಪಿ ಪ್ರಣಾಳಿಕೆಯನ್ನು ಓದಿ ಹೇಳಿದ ಸಿದ್ದರಾಮಯ್ಯ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.