ಆಯತಪ್ಪಿ ಬಿದ್ದ ಸೋಮಣ್ಣ, ಸಹಾಯಕ್ಕೆ ಧಾವಿಸಿದ ಕಿಚ್ಚ ಸುದೀಪ್: ವಿಡಿಯೋ ನೋಡಿ

ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ.

ಚಾಮರಾಜನಗರ:  ಚಾಮರಾಜನಗರ ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಅವರು ರೋಡ್​ ಶೋ ವೇಳೆ ಕಾರಿನ ಮೇಲಿಂದ ಆಯತಪ್ಪಿ ಬಿದ್ದಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರಕ್ಕೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಂದು(ಮೇ 05)​ ಚಾಮರಾಜನಗರಕ್ಕೆ ಆಗಮಿಸಿದ್ದು, ಈ ವೇಳೆ ಸುದೀಪ್ ನೋಡಲು ಅವರ ಅಭಿಮಾನಿಗಳು, ಬಿಜೆಪಿ ಕಾರ್ಯಕರ್ತರು ಸೇರಿದ್ದು, ನೂಕುನುಗ್ಗಲು ಉಂಟಾಗಿದೆ. ಸೋಮಣ್ಣ ಸಹ ಸುದೀಪ್ ಕೊತೆ ಕಾರಿನ ಮೇಲೆ ನಿಂತಿಕೊಂwu ಜನರತ್ತ ಕೈ ಬೀಸುತ್ತಿದ್ದರು,  ಅಭಿಮಾನಿಯೊಬ್ಬರು ದಿಢೀರ್​ ಕಾರಿನ ಮೇಲೆ ಬಂದು ಸೋಮಣ್ಣ ಅವರನ್ನು ಹಿಡಿದುಕೊಂಡಿದ್ದಾರೆ. ಇದರಿಂದ ಸೋಮಣ್ಣ ಆಯತಪ್ಪಿ ಕಾರಿನ ಮೇಲೆಯೇ ಬಿದ್ದಿದ್ದಾರೆ. ಕೂಡಲೇ ಕಾರ್ಯಕರ್ತರು ಸೋಮಣ್ಣ ಅವರನ್ನು ಹಿಡಿದುಕೊಂಡರು. ಅಲ್ಲದೇ ಸುದೀಪ್ ಸಹ ಸೋಮಣ್ಣ ಅವರ ಸಹಾಯಕ್ಕೆ ಧಾವಿಸಿದರು. ಬಳಿಕ ಸೋಮಣ್ಣ ಅವರು ಕಾರಿನ ಟಾಫ್​ನಿಂದ ಕೆಳಗೆ ಇಳಿದದರು.

ಈ ಬಾರಿ ಚುನಾವಣೆಯಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಬಿಜೆಪಿ ಅಭ್ಯರ್ಥಿಗಳ ಅಬ್ಬರದ ಪ್ರಚಾರ ಮಾಡುತ್ತಿದ್ದು, ಅವರು ಹೋದಲೆಲ್ಲ ಅವರ ಅಭಿಮಾನಿಗಳು ಕಿಕ್ಕಿರಿದು ಸೇರುತ್ತಿದ್ದಾರೆ. ಮಧ್ಯ ಕರ್ನಾಟಕ, ಕಿತ್ತೂರು ಕರ್ನಾಟಕ ಹಾಗೂ ಉತ್ತರ ಕರ್ನಾಟಕದಲ್ಲಿ ಭರ್ಜರಿ ಪ್ರಚಾರ ಮಾಡಿದ ಸುದೀಪ್ ಇದೀಗ ಹಳೇ ಮೈಸೂರು ಭಾಗದಲ್ಲಿ ಪ್ರಚಾರಕ್ಕಿಳಿದಿದ್ದಾರೆ. ಇಂದು ಚಾಮರಾಜನಗರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ.

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us