AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಮತ್ತು ಕಡುಭ್ರಷ್ಟ ಸರ್ಕಾರ: ಸಿದ್ದರಾಮಯ್ಯ

ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರ ರಾಜ್ಯ ಕಂಡ ಅತ್ಯಂತ ಕೆಟ್ಟ ಮತ್ತು ಕಡುಭ್ರಷ್ಟ ಸರ್ಕಾರ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
|

Updated on: Feb 15, 2023 | 12:30 PM

Share

ಇದೊಂದು ಲಜ್ಜೆಗೆಟ್ಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು.

ಬೆಂಗಳೂರು: ಈಗ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ರಾಜ್ಯ ಹಿಂದೆಂದೂ ಕಾಣದ ಅತಿ ಕೆಟ್ಟ ಮತ್ತು ಭ್ರಷ್ಟ ಸರ್ಕಾರ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಹೇಳಿದರು. ನಗರದಲ್ಲಿ ಇಂದು ಪತ್ರಿಕಾ ಗೋಷ್ಟಿಯೊಂದನ್ನು ಉದ್ದೇಶಿಸಿ ಮಾತಾಡಿದ ಅವರು, ವಿರೋಧ ಪಕ್ಷ (opposition party) ಮಾಡುವ ಎಲ್ಲ ಆರೋಪಗಳಿಗೆ ದಾಖಲಾತಿ ಕೇಳುತ್ತಾರೆ. ಅವರ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಮತ್ತು ಹೆಚ್ ವಿಶ್ವನಾಥ್ ಆರೋಪಗಳನ್ನು ಮಾಡಿದ್ದಾರೆ. ಹಾಗಾದರೆ ಅವರು ಹೇಳುತ್ತಿರೋದು ಸುಳ್ಳಾ? ತಮ್ಮ ಕೈಯಲ್ಲಿರುವ ದಾಖಲಾತಿ ಸುಳ್ಳೇ? ಎಂದು ಸಿದ್ದರಾಮಯ್ಯ ಹೇಳಿದರು. ಇದೊಂದು ಲಜ್ಜೆಗೆಟ್ಟ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿಹೋಗಿರುವ ಸರ್ಕಾರ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ