KS EShwarappa on results; ರಾಜ್ಯದಲ್ಲಿ ಬಿಜೆಪಿ ಸೋತರೂ ಕಳೆದ ಬಾರಿಗಿಂತ ಹೆಚ್ಚು ಮತ ಗಳಿಸಿದೆ: ಕೆ ಎಸ್ ಈಶ್ವರಪ್ಪ

ಅರುಣ್​ ಕುಮಾರ್​ ಬೆಳ್ಳಿ

Updated on: May 15, 2023 | 1:31 PM

ನಾಯಕತ್ವ, ಸಂಘಟನೆ ಮತ್ತು ಅಭಿವೃದ್ಧಿ ಕಾರ್ಯಗಳಿಂದಾಗಿ ಚನ್ನಬಸಪ್ಪ ಗೆದ್ದರು ಎಂದು ಈಶ್ವರಪ್ಪ ಹೇಳುತ್ತಾರೆ.

ಶಿವಮೊಗ್ಗ: ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಲಿಲ್ಲ ಅನ್ನುವ ಹಾಗಿದೆ ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ (KS Eshwarappa) ಆಡುವ ಮಾತು. ಶಿವಮೊಗ್ಗದಲ್ಲಿ (Shivamogga) ಇಂದು ಪತ್ರಿಕಾ ಗೋಷ್ಟಿ ನಡೆಸಿ ಮಾತಾಡಿದ ಅವರು ಬಿಜೆಪಿ ಸೋಲಿಗೆ ಕಾರಣಗಳೇನು ಅಂತ ಕೇಳಿದ ಪ್ರಶ್ನೆಗೆ ಉತ್ತರ ಕೊಡುವ ಬದಲು, ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಬಸಪ್ಪ (Channabasappa) ಗೆದ್ದ ಸಂಗತಿಯನ್ನು ಸವಿಸ್ತಾರವಾಗಿ ಹೇಳುತ್ತಾರೆ. ಅವರ ಗೆಲುವಿಗೆ ರಾಷ್ಟ್ರ ಮತ್ತು ರಾಜ್ಯ ನಾಯಕರು ಪ್ರಚಾರ ಹೇಗೆ ನೆರವಾಯಿತು ಅಂತ ಈಶ್ವರಪ್ಪ ಹೇಳುತ್ತಾರೆ. ನಾಯಕತ್ವ, ಸಂಘಟನೆ ಮತ್ತು ಅಭಿವೃದ್ಧಿ ಕಾರ್ಯಗಳಿಂದಾಗಿ ಚನ್ನಬಸಪ್ಪ ಗೆದ್ದರು ಎಂದು ಹೇಳುವ ಅವರು ಕೊನೆಯಲ್ಲಿ ಕರ್ನಾಟಕದ ಒಟ್ಟಾರೆ ಫಲಿತಾಂಶದ ಬಗ್ಗೆ ಮಾತಾಡುತ್ತಾರೆ. ಅವರ ಲಾಜಿಕ್ ಕೇಳಿಸಿಕೊಳ್ಳಿ, ಬಿಜೆಪಿ ಸೋತರೂ 2018 ರ ಚುನಾವಣೆಗಿಂತ ಶೇಕಡ 0.4 ರಷ್ಟು ಹೆಚ್ಚು ವೋಟು ಗಿಟ್ಟಿಸಿದೆ ಅಂತ ಹೇಳಿ ಸಮಾಧಾನಪಟ್ಟುಕೊಳ್ಳುತ್ತಾರೆ.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್  ಮಾಡಿ

 

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.