ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ, ಕಾಂಗ್ರೆಸ್ ಸೇರುತ್ತಿದ್ದೇನೆ: ಸುಕುಮಾರ್ ಶೆಟ್ಟಿ, ಮಾಜಿ ಬಿಜೆಪಿ ಶಾಸಕ

ಬಿಜೆಪಿಯಲ್ಲಿ ಬೆಳೆಯುವ ಅವಕಾಶವಿಲ್ಲ, ಕಾಲೆಳೆಯುವವರ ಸಂಖ್ಯೆಯೇ ಜಾಸ್ತಿ ಎಂದು ಅವರು ಹೇಳಿದರು. ಚುನಾವಣೆ ಮುಗಿದು 4 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನ್ನು ಆರಿಸಲಾಗದ ಮತ್ತು ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನನ್ನು ನೇಮಕ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ ಎಂದು ಶೆಟ್ಟಿ ಹೇಳಿದರು.

ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಆಯ್ಕೆ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ, ಕಾಂಗ್ರೆಸ್ ಸೇರುತ್ತಿದ್ದೇನೆ: ಸುಕುಮಾರ್ ಶೆಟ್ಟಿ, ಮಾಜಿ ಬಿಜೆಪಿ ಶಾಸಕ
|

Updated on: Sep 08, 2023 | 1:16 PM

ಉಡುಪಿ: ಆಪರೇಶನ್ ಹಸ್ತ ಜಾರಿಯಲ್ಲಿದೆ ಅನ್ನೋದನ್ನು ಉಡುಪಿ ಬೈಂದೂರು ಮಾಜಿ ಬಿಜೆಪಿ ಶಾಸಕ ಸುಕುಮಾರ್ ಶೆಟ್ಟಿ (Sukumar Shetty) ಪ್ರೂವ್ ಮಾಡಿದ್ದಾರೆ. ಇಂದು ತಮ್ಮ ನಿವಾಸದಲ್ಲಿ ಟಿವಿ9 ಕನ್ನಡ ವಾಹಿನಿಯ ಉಡುಪಿ ವರದಿಗಾರನೊಂದಿಗೆ ಮಾತಾಡಿದ ಶೆಟ್ಟಿ, ಡಿಕೆ ಶಿವಕುಮಾರ್ (SK Shivakumar) ತನೆಗ 2-3 ಬಾರಿ ಕರೆ ಮಾಡಿದ್ದಾರೆ ಮತ್ತು ತಾನು ಕಾಂಗ್ರೆಸ್ ಸೇರಲಿರುವುದು ನಿಶ್ಚಿತ ಎಂದು ಹೇಳಿದರು. ತಮ್ಮ ನಿರ್ಧಾರದ ಹಿಂದೆ ಬೇರೆ ಕಾರಣಗಳೂ ಇವೆ ಎಂದು ಅವರು ಹೇಳಿದರು. ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೈಂದೂರು ಕ್ಷೇತ್ರದಲ್ಲಿ (Byndoor constituency) ಕಳೆದ 10 ವರ್ಷಗಳಿಂದ ಬಿಜೆಪಿ ಪ್ರಬಲಗೊಳ್ಳುವಂತೆ ಮಾಡಿದ್ದರೂ ಕಳೆದ ಸಲ ತನಗೆ ಟಿಕೆಟ್ ನೀಡಲಿಲ್ಲ. ಬಿಜೆಪಿಯಲ್ಲಿ ಬೆಳೆಯುವ ಅವಕಾಶವಿಲ್ಲ, ಕಾಲೆಳೆಯುವವರ ಸಂಖ್ಯೆಯೇ ಜಾಸ್ತಿ ಎಂದು ಅವರು ಹೇಳಿದರು. ಚುನಾವಣೆ ಮುಗಿದು 4 ತಿಂಗಳಾದರೂ ಒಬ್ಬ ವಿರೋಧ ಪಕ್ಷದ ನಾಯಕನ್ನು ಆರಿಸಲಾಗದ ಮತ್ತು ಪಕ್ಷದ ರಾಜ್ಯ ಘಟಕಕ್ಕೆ ಅಧ್ಯಕ್ಷನನ್ನು ನೇಮಕ ಮಾಡಲಾಗದ ಬಿಜೆಪಿಗೆ ಭವಿಷ್ಯವಿಲ್ಲ ಎಂದ ಶೆಟ್ಟಿ, ಮುಂಬರುವ ದಿನಗಳಲ್ಲಿ ಒಂದು ದೊಡ್ಡ ಕಾರ್ಯಕ್ರಮವನ್ನು ಆಯೋಜಸಿ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಸಮಕ್ಷಮದಲ್ಲಿ ಕಾಂಗ್ರೆಸ್ ಸೇರುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್