AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಈಶ್ವರಪ್ಪ ಮಗನಿಗೂ ಟಿಕೆಟ್​ ಇಲ್ಲ, ಹೈಕಮಾಂಡ್ ಆಯ್ಕೆ ಚನ್ನಬಸಪ್ಪ ಗೆಲುವಿಗೆ ಶಕ್ತಿಮೀರಿ ಪ್ರಯತ್ನ ಎಂದ ಮಾಜಿ ಸಚಿವ

Karnataka Assembly Polls: ಈಶ್ವರಪ್ಪ ಮಗನಿಗೂ ಟಿಕೆಟ್​ ಇಲ್ಲ, ಹೈಕಮಾಂಡ್ ಆಯ್ಕೆ ಚನ್ನಬಸಪ್ಪ ಗೆಲುವಿಗೆ ಶಕ್ತಿಮೀರಿ ಪ್ರಯತ್ನ ಎಂದ ಮಾಜಿ ಸಚಿವ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Apr 20, 2023 | 12:42 PM

Share

ಈ ನಿರಾಶೆಯನ್ನೂ ಸ್ಪೋರ್ಟ್ ಆಗಿ ಸ್ವೀಕರಿಸಿರುವ ಈಶ್ವರಪ್ಪ; ಚನ್ನಬಸ್ಸಪ್ಪ ಒಬ್ಬ ಉತ್ತಮ ಸಂಘಟಕ ಮತ್ತು ನಿಷ್ಠಾವಂತ ನಾಯಕನಾಗಿದ್ದಾರೆ, ಅವರ ಆಯ್ಕೆ ಒಂದು ಒಳ್ಳೆಯ ನಿರ್ಧಾರ ಎಂದು ಹೇಳಿದರು.

ಶಿವಮೊಗ್ಗ: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪನವರಿಗೆ (KS Eshwarappa) ಎರಡನೇ ಬಾರಿ ನಿರಾಸೆಯಾಗಿದೆ. ಶಿವಮೊಗ್ಗ ವಿಧಾನಸಭಾ ಕ್ಷೇತ್ರಕ್ಕೆ ಪಕ್ಷದ ವರಿಷ್ಠರು ತಮಗೆ ಟಿಕೆಟ್ ನಿರಾಕರಿಸಿದ ಬಳಿಕ ಅವರು ತಮ್ಮ ಪುತ್ರ ಕೆಈ ಕಾಂತೇಶ್ ಗೆ (KE Kantesh) ಕೊಡಿ ಅಂತ ಬೇಡಿಕೆಯಿಟ್ಟಿದ್ದರು. ಆದರೆ ಅವರ ಬೇಡಿಕೆಯನ್ನು ತಿರಸ್ಕರಿಸಿದ ಹೈಕಮಾಂಡ್ ಜಿಲ್ಲಾ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿ ಚನ್ನಬಸಪ್ಪಗೆ (Channabasappa) ಟಿಕೆಟ್ ನೀಡಿದೆ. ಈ ನಿರಾಶೆಯನ್ನೂ ಸ್ಪೋರ್ಟ್ ಆಗಿ ಸ್ವೀಕರಿಸಿರುವ ಈಶ್ವರಪ್ಪ; ಚನ್ನಬಸ್ಸಪ್ಪ ಒಬ್ಬ ಉತ್ತಮ ಸಂಘಟಕ ಮತ್ತು ನಿಷ್ಠಾವಂತ ನಾಯಕನಾಗಿದ್ದಾರೆ, ಅವರ ಆಯ್ಕೆ ಒಂದು ಒಳ್ಳೆಯ ನಿರ್ಧಾರ ಎಂದು ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಟಿ ಕರೆದು ಮಾತಾಡಿದ ಅವರು ಚನ್ನಬಸ್ಸಪ್ಪರ ಗೆಲುವಿಗೆ ಶಕ್ತಿಮೀರಿ ಪ್ರಯತ್ನಿಸುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Published on: Apr 20, 2023 10:18 AM

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.