ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಮನಗಂಡೇ ವರಿಷ್ಟರು ಶೆಟ್ಟರ್ ರನ್ನು ವಾಪಸ್ಸು ಸೇರಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ

ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ನೆಚ್ಚಿಕೊಂಡರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ ಅನ್ನೋದನ್ನು ಮನಗಂಡಿರುವ ಬಿಜೆಪಿ ವರಿಷ್ಠರು ಶೆಟ್ಟರ್ ಅವರನ್ನು ವಾಪಸ್ಸು ಬರಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ನಾಯಕತ್ವದ ಕೊರತೆ ಮನಗಂಡೇ ವರಿಷ್ಟರು ಶೆಟ್ಟರ್ ರನ್ನು ವಾಪಸ್ಸು ಸೇರಿಸಿಕೊಂಡಿದ್ದಾರೆ: ಪ್ರಿಯಾಂಕ್ ಖರ್ಗೆ
|

Updated on: Jan 26, 2024 | 5:09 PM

ಕಲಬುರಗಿ: ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಕೊರತೆ ಇರೋದು ಬಿಜೆಪಿ ವರಿಷ್ಠರಿಗೆ ಅರ್ಥವಾಗಿದೆ ಎಂದು ಹೇಳಿದರು. ಜಗದೀಶ್ ಶೆಟ್ಟರ್ (Jagadish Shettar) ಅವರನ್ನು ಬಿಜೆಪಿಗೆ ವಾಪಸ್ಸು ಕರೆದೊಯ್ದಿರುವುದು ಈ ಅಂಶವನ್ನು ಸ್ಪಷ್ಟಪಡಿಸುತ್ತದೆ ಎಂದು ಅವರು ಹೇಳಿದರು. ನಿನ್ನೆ ಬಿಜೆಪಿ ಸೇರಿದ ಬಳಿಕ ಶೆಟ್ಟರ್ ಆಡಿದ ಮಾತುಗಳನ್ನು ಗಮನಿಸಿ; ಕಾಂಗ್ರೆಸ್ ಪಕ್ಷದ ನಾಯಕರು (Congress party) ನನ್ನನ್ನು ಚೆನ್ನಾಗಿ ನಡೆಸಿಕೊಂಡು ಸೂಕ್ತ ಸ್ಥಾನಮಾನಗಳನ್ನು ನೀಡಿ ಗೌರುವಿಸಿದರು, ಆದರೆ ಪ್ರಧಾನಿ ಮೋದಿಯವರ ಕೈ ಬಲಪಡಿಸುವುದಕ್ಕೋಸ್ಕರ ವಾಪಸ್ಸು ಬಂದಿದ್ದೇನೆ ಅಂತ ಶೆಟ್ಟರ್ ಹೇಳಿದ್ದನ್ನು ಖರ್ಗೆ ತಿಳಿಸಿದರು. ವಿರೋಧ ಪಕ್ಷದ ನಾಯಕ ಆರ್ ಅಶೋಕ ಮತ್ತು ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರನ್ನು ನೆಚ್ಚಿಕೊಂಡರೆ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವುದು ಕಷ್ಟವಾಗುತ್ತದೆ ಅನ್ನೋದನ್ನು ಮನಗಂಡಿರುವ ಬಿಜೆಪಿ ವರಿಷ್ಠರು ಶೆಟ್ಟರ್ ಅವರನ್ನು ವಾಪಸ್ಸು ಬರಮಾಡಿಕೊಂಡಿದ್ದಾರೆ ಎಂದು ಖರ್ಗೆ ಹೇಳಿದರು. ಹೋಗಲಿಚ್ಛಿಸುವವರು ಹೋಗುತ್ತಾರೆ ಅದರಿಂದ ಕಾಂಗ್ರೆಸ್ ಪಕ್ಷಕ್ಕೇನೂ ಹಾನಿಯಿಲ್ಲ, ಅಂತ ಸಚಿವ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​