ಬಿಜೆಪಿ ಒಂದು ಮತೀಯ ಹಾಗೂ ಕೋಮುವಾದಿ ಪಕ್ಷ, ಜೆಡಿಎಸ್ ಮೈತ್ರಿಗೆ ಹೋಗಿರುವುದು ಆಶ್ಚರ್ಯ: ಬಿಎನ್ ಬಚ್ಚೇಗೌಡ, ಬಿಜೆಪಿ ಸಂಸದ

ಜಾತ್ಯಾತೀತ ಅಂತ ಹೆಸರಿಟ್ಟುಕೊಂಡು ಒಂದು ಕೋಮುವಾದಿ ಪಕ್ಷದ ಜೊತೆ ಸ್ನೇಹ ಬೆಳೆಸಲು ಹೊರಟಿದ್ದಾರೆ, ಇದು ತಮ್ಮಲ್ಲಿ ಆಶ್ಚರ್ಯ ಹುಟ್ಟಿಸಿದೆ ಎಂದು ಬಚ್ಚೇಗೌಡ ಹೇಳಿದರು. ಸರ್ ನೀವು ಬಿಜೆಪಿ ಸಂಸದರು ಅಲ್ವಾ ಅಂತ ಕೇಳಿದಾಗ, ಹೌದು ನಿಜ, ಹಾಗಂತ ಪಕ್ಷ ಮಾಡಿದ್ದನ್ನೆಲ್ಲ ಸರಿ ಅಂತ ಹೇಳಲಾಗಲ್ಲ. ನನಗೂ ಸಾಕಷ್ಟು ಅನುಭವವಾಗಿದೆ, ಕೆಲವು ಸಲ ಸುಮ್ಮನಿರಬೇಕಾಗುತ್ತದೆ ಎಂದು ಹೇಳಿದರು.  

|

Updated on: Sep 08, 2023 | 5:44 PM

ಚಿಕ್ಕಬಳ್ಳಾಪುರ: ಬಿಜೆಪಿ ಒಂದು ಮತೀಯ ಪಕ್ಷ, ಕೋಮುವಾದಿ ಪಕ್ಷ-ಅಂತ ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದರೆ ಅದರಲ್ಲಿ ಹೊಸತೇನೂ ಇರುತ್ತಿರಲಿಲ್ಲ ಮಾರಾಯ್ರೇ. ಆದರೆ ಅದನ್ನು ಯಾರು ಹೇಳುತ್ತಿದ್ದಾರೆ ಅಂತ ಒಮ್ಮೆ ನೋಡಿ! ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ (BN Bache Gowda)! ಗೌಡರು ನೇರ, ನಿರ್ಭಿಡೆ ಮಾತಿಗಳಿಗೆ ಹೆಸರಾದವರು ಅಂತ ಕನ್ನಡಿಗರಿಗೆ ಗೊತ್ತು. ಮೊನ್ನೆಯಷ್ಟೇ ಅವರು ಸಕ್ರಿಯ ರಾಜಕಾರಣಕ್ಕೆ (electoral politics) ವಿದಾಯ ಘೋಷಿಸಿದ್ದರು. ಇಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ನಡೆದ ದಿಶಾ ಸಭೆಯಲ್ಲಿ (DISHA meeting) ಮಾತಾಡಿದ ಗೌಡರು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್ ಪಕ್ಷದ ನಾಯಕರನ್ನು ತರಾಟೆಗೆ ತೆಗೆದುಕೊಂಡರು. ಜಾತ್ಯಾತೀತ ಅಂತ ಹೆಸರಿಟ್ಟುಕೊಂಡು ಒಂದು ಕೋಮುವಾದಿ ಪಕ್ಷದ ಜೊತೆ ಸ್ನೇಹ ಬೆಳೆಸಲು ಹೊರಟಿದ್ದಾರೆ, ಇದು ತಮ್ಮಲ್ಲಿ ಆಶ್ಚರ್ಯ ಹುಟ್ಟಿಸಿದೆ ಎಂದು ಬಚ್ಚೇಗೌಡ ಹೇಳಿದರು. ಸರ್ ನೀವು ಬಿಜೆಪಿ ಸಂಸದರು ಅಲ್ವಾ ಅಂತ ಕೇಳಿದಾಗ, ಹೌದು ನಿಜ, ಹಾಗಂತ ಪಕ್ಷ ಮಾಡಿದ್ದನ್ನೆಲ್ಲ ಸರಿ ಅಂತ ಹೇಳಲಾಗಲ್ಲ. ನನಗೂ ಸಾಕಷ್ಟು ಅನುಭವವಾಗಿದೆ, ಕೆಲವು ಸಲ ಸುಮ್ಮನಿರಬೇಕಾಗುತ್ತದೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

 

 

 

Follow us
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಕಿಮ್ಸ್​ ಆವರಣದಲ್ಲೇ ಡಿಜೆ ಹಾಡಿಗೆ ಕುಣಿದ ವಿದ್ಯಾರ್ಥಿಗಳು; ವಿಡಿಯೋ ನೋಡಿ
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ಗಣೇಶನ ಪೆಂಡಾಲ್​ನಲ್ಲಿ ಚಂದ್ರಯಾನ-3 ಯಶೋಗಾಥೆ, ನೆಟ್ಟಿಗರು ಮೂಕವಿಸ್ಮಿತ!
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ನಿಮ್ಮ ಅಮ್ಮನಿಗೂ ಗೊತ್ತಾಯಿತು ನೋಡಿ ನಿಮ್ಮ ಕೆಲಸದ ಬಗ್ಗೆ
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಹುಬ್ಬಳ್ಳಿ: ಗಣೇಶ ವಿಸರ್ಜನೆ ವೇಳೆ ಪೊಲೀಸರ ಸಖತ್​​ ಡ್ಯಾನ್ಸ್​​: Video
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಇನ್​ಸ್ಪೆಕ್ಟರ್​ ಸೇವೆಗೆ ಪ್ರಧಾನಿ ಮೋದಿ ಶ್ಲಾಘನೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಕೀರ್ತಿ ಪತಾಕೆ ಹಾರಿಸ್ತೀವಿ ಅಂತಿದ್ದಾರೆ ಯಾದಗಿರಿಯ ಈ ಕ್ರೀಡಾಪಟುಗಳು, ಆದರೆ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
ಗಣೇಶೋತ್ಸವದಲ್ಲಿ ಕಾಂತಾರಾ ಚಿತ್ರದ ಪಂಜುರ್ಲಿ ನೃತ್ಯ ಪ್ರದರ್ಶನ
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
‘ಕಾವೇರಿಗೆ ನಾನು ಜೀವ ಕೊಡ್ತೀನಿ’ ಎಂದ ನಟ ರಾಘವೇಂದ್ರ ರಾಜ್​ಕುಮಾರ್​
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಜನರ ಸಮಸ್ಯೆಗಳನ್ನು ಆಲಿಸಿದ ಉತ್ತರ ವಿಭಾಗದ ಹೊಸ ಡಿಸಿಪಿ ಸೈದಲು ಅಡಾವತ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್
ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ:ಡಿಕೆ ಶಿವಕುಮಾರ್