ಕೋಲಾರ ಕುರುಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಜೆಡಿಎಸ್ ರಣತಂತ್ರ

ಚುನಾವಣೆ ಇನ್ನೇನು ಕೆಲವು ತಿಂಗಳು ಬಾಕಿ ಇದ್ದು, ಕೋಲಾರ ಕ್ಷೇತ್ರದ ಮೇಲೆ ಎಲ್ಲರ ಚಿತ್ತವಿದೆ, ಈ ಬಾರಿ ಹೇಗಾದರೂ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ, ಜೆಡಿಎಸ್​ ರಣತಂತ್ರ ಹೆಣೆಯುತ್ತಿದ್ದಾರೆ.

ಕೋಲಾರ ಕುರುಕ್ಷೇತ್ರದಲ್ಲಿ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ ಜೆಡಿಎಸ್ ರಣತಂತ್ರ
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 22, 2023 | 10:54 AM

ಬೆಂಗಳೂರು: ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಚುನಾವಣಾ ಕಾವು ಹೆಚ್ಚಾಗುತ್ತಾಯಿದೆ. ರಾಜ್ಯದಲ್ಲಿ 224 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಆದರೆ ಇದೀಗ ಸಿದ್ದರಾಮಯ್ಯ ಕಣಕ್ಕೆ ಇಳಿಯುತ್ತಿರುವ ಕೋಲಾರ ಕ್ಷೇತ್ರ ಹೆಚ್ಚು ಸದ್ದು ಮಾಡುತ್ತಿದೆ. ಎಲ್ಲರೂ ಸೇರಿ ಸಿದ್ದರಾಮಯ್ಯರವರನ್ನ ಸೋಲಿಸಲು ಇದೀಗ ರೆಡಿಯಾಗಿದ್ದಾರೆ. ಇದು ಸಿದ್ದರಾಮಯ್ಯರವರ ಕೊನೆಯ ಚುನಾವಣೆ ಆದ್ದರಿಂದ ಜಾತಿ ಸರ್ವೇ ಮಾಡಿ,  ಎಲ್ಲರ ಒಪ್ಪಿಗೆಯನ್ನ ಪಡೆದು ಕೋಲಾರದಲ್ಲಿ ನಾನೇ ಗೆಲ್ಲುವುದು ಎಂದು ಘೋಷಣೆ ಮಾಡಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯರನ್ನ ಸೋಲಿಸಲು ಬಿಜೆಪಿ, ಜೆಡಿಎಸ್​ ರಣತಂತ್ರ ಹೆಣೆಯುತ್ತಿದೆ.

ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:53 am, Sun, 22 January 23

Follow us