ಬಿಜೆಪಿಗೆ ಹಿಂದೂ ಮತ್ತು ಮುಸಲ್ಮಾನರು ಜಗಳ ಮಾಡುವುದು ಬೇಕು, ಬೇರೇನೂ ಬೇಡ: ಜಮೀರ್ ಅಹ್ಮದ್, ಶಾಸಕ

ಅರುಣ್​ ಕುಮಾರ್​ ಬೆಳ್ಳಿ

Updated on: Feb 01, 2023 | 4:44 PM

ಪ್ರಧಾನಿ ಮೋದಿ 2014ರಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ, ಅಚ್ಛೇ ದಿನ್ ಆಯೆಂಗೆ ಅಂತ ಹೇಳಿದ್ದರು. ಯಾರಿಗಾದರೂ ಅಚ್ಛೇ ದಿನ್ ಬಂದವೇ? ಯಾರಿಗಾದರೂ ನೌಕರಿ ಸಿಕ್ಕಿತೇ, ಯಾರದ್ದಾದರೂ ವಿಕಾಸ ಆಯಿತೇ? ಎಂದು ಜಮೀರ್ ಕೇಳಿದರು,

ಕೋಲಾರ:  ಕೆಲದಿನಗಳಿಂದ ಕಣ್ಮರೆಯಾಗಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ (Zameer Ahmed) ಕೋಲಾರದಲ್ಲಿ ಇಂದು ಸಾರ್ವಜನಿಕರೆದುರು ಪ್ರತ್ಯಕ್ಷರಾದರು. ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಗೌನಪಲ್ಲಿ ಗ್ರಾಮದಲ್ಲಿ ಸಾರ್ವಜನಿಕ ಸಭೆಯೊಂದನ್ನು ಉದ್ದೇಶಿಸಿ ಮಾತಾಡಿದ ಜಮೀರ್ ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಹಾಗೂ ಗೃಹ ಸಚಿವ ಅಮಿತ್ ಶಾ (Amit Shah) ವಿರುದ್ಧ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ 2014ರಲ್ಲಿ ಸಬ್ ಕಾ ಸಾಥ್ ಸಬ್ ಕಾ ವಿಕಾಸ, ಅಚ್ಛೇ ದಿನ್ ಆಯೆಂಗೆ ಅಂತ ಹೇಳಿದ್ದರು. ಯಾರಿಗಾದರೂ ಅಚ್ಛೇ ದಿನ್ ಬಂದವೇ? ಯಾರಿಗಾದರೂ ನೌಕರಿ ಸಿಕ್ಕಿತೇ, ಯಾರದ್ದಾದರೂ ವಿಕಾಸ ಆಯಿತೇ? ಬಿಜೆಪಿಗೆ ಇದ್ಯಾವುದೂ ಬೇಕಿಲ್ಲ, ಅವರಿಗೆ ಕೇವಲ ಹಿಂದೂ-ಮುಸಲ್ಮಾನರ ನಡುವೆ ಜಗಳ ತಂದಿಡುವುದು ಬೇಕು, ಎಂದು ಜಮೀರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Feb 01, 2023 04:41 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.