ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ

ದೀಪಾವಳಿ ಹಬ್ಬದೊಳಗೆ ಸಿಎಂ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದೆ ಎಂದು ಬಿಜೆಪಿ ಎಂಎಲ್​ಸಿ ಸಿಟಿ ರವಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರಕ್ಕೆ ಟೈಮ್ ಬಾಂಬ್​ ಫಿಕ್ಸ್ ಆಗಿದೆ. ಸಂಕ್ರಾಂತಿ ತುಂಬಾ ದೂರ ಆಯ್ತು, ದೀಪಾವಳಿ ಒಳಗೆ ಸರ್ಕಾರ ಢಮಾರ್ ಎಂದರು.

ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
| Updated By: ಗಣಪತಿ ಶರ್ಮ

Updated on: Sep 09, 2024 | 2:51 PM

ಹುಬ್ಬಳ್ಳಿ, ಸೆಪ್ಟೆಂಬರ್ 9: ಹೊಸ ಸಿಎಂ, ಹೊಸ ಸರ್ಕಾರದ ಬಗ್ಗೆ ಕಾಲವೇ ನಿರ್ಣಯ ಮಾಡಲಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಕಾಂಗ್ರೆಸ್​​​ ಮುಹೂರ್ತ ನಿಗದಿ ಮಾಡಿದೆ. ಹೊರಗೆ ಸಿದ್ದರಾಮಯ್ಯ ಹಿಂದೆ ಬಂಡೆಯಂತೆ ಇರುತ್ತೇವೆ ಎನ್ನುತ್ತಾರೆ. ಆದರೆ, ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯುವುದು ಫಿಕ್ಸ್ ಆಗಿದೆ. ಹೀಗಾಗಿ ಕಾಂಗ್ರೆಸ್​​​ನಲ್ಲಿ ಸಿಎಂ ಹುದ್ದೆಗೆ ಸ್ಪರ್ಧೆ ಶುರುವಾಗಿದೆ. ಕಾಂಗ್ರೆಸ್​ನಲ್ಲಿ 1 ಡಜನ್​ಗೂ ಹೆಚ್ಚು ಸಚಿವರು ಸಿಎಂ ಆಕಾಂಕ್ಷಿಗಳಿದ್ದಾರೆ ಎಂದು ಸಿಟಿ ರವಿ ಹೇಳಿದರು.

ಈ ಮಧ್ಯೆ, ದೀಪಾವಳಿ ಒಳಗೆ ಸರ್ಕಾರ ಪತನ ಎಂದು ಎಂಬ ಸಿಟಿ ರವಿ ಹೇಳಿಕೆಯನ್ನು ಪ್ರತಿಪಕ್ಷ ನಾಯಕ ಆರ್​.ಅಶೋಕ್​​​ ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್​​ ರಾಕೆಟ್​​​ ಹಾರಿಸೋದು, ಪಟಾಕಿ ಹೊಡೆಯುವುದು ಖಚಿತ. ಯಾವಾಗ ಪಟಾಕಿ ಹೊಡೆದು ರಾಕೆಟ್ ಹಾರಿಸುತ್ತಾರೋ ಗೊತ್ತಿಲ್ಲ ಎಂದು ಅವರು ಬೆಂಗಳೂರಿನಲ್ಲಿ ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow us