ಸಿದ್ದರಾಮಯ್ಯ ಸಿಎಮ್ ಆಗಿದ್ದಾಗ ಅತಿಥಿಗಳ ಕಾಫಿ-ತಿಂಡಿಗಾಗಿ ರೂ. 200 ಕೋಟಿ ಖರ್ಚು ಮಾಡಲಾಗಿದೆ: ಎನ್ ಆರ್ ರಮೇಶ್, ಬಿಜೆಪಿ ಮುಖಂಡ
ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ ಬರುತ್ತಿದ್ದ ಅತಿಥಿಗಳಿಗೆ ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೋರೇಟರ್ ಎನ್ ಆರ್ ರಮೇಶ್ (NR Ramesh) ಹಗರಣಗಳನ್ನು ಬಯಲು ಮಾಡುವಲ್ಲಿ ಸಿದ್ಧಹಸ್ತರು. ಈ ಬಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಮೇಲೆ ರೂ. 200 ಕೋಟಿ ಹಗರಣದ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ (CMO) ಬರುತ್ತಿದ್ದ ಅತಿಥಿಗಳಿಗೆ ಕಾಫಿ-ಬಿಸ್ಕತ್ತು ತಿಂಡಿ-ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಮತ್ತು ಕೇವಲ ಈ ಬಾಬತ್ತಿನಲ್ಲೇ 200 ಕೋಟಿ ರೂ. ಗಳಿಗೂ ಹೆಚ್ಚಿನ ಹಣವನ್ನು ಲೂಟಿ ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 07, 2023 11:45 AM
Follow Us
Latest Videos
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಅಮೆರಿಕದ ಶಿಕಾಗೋನಲ್ಲಿ ಹೇಗಿದೆ ನೋಡಿ ನಟ ದಿಲ್ಜೀತ್ ಹವಾ: ವಿಡಿಯೋ

