ಸಿದ್ದರಾಮಯ್ಯ ಸಿಎಮ್ ಆಗಿದ್ದಾಗ ಅತಿಥಿಗಳ ಕಾಫಿ-ತಿಂಡಿಗಾಗಿ ರೂ. 200 ಕೋಟಿ ಖರ್ಚು ಮಾಡಲಾಗಿದೆ: ಎನ್ ಆರ್ ರಮೇಶ್, ಬಿಜೆಪಿ ಮುಖಂಡ
ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ ಬರುತ್ತಿದ್ದ ಅತಿಥಿಗಳಿಗೆ ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಬೆಂಗಳೂರು: ಬಿಜೆಪಿ ನಾಯಕ ಮತ್ತು ಮಾಜಿ ಕಾರ್ಪೋರೇಟರ್ ಎನ್ ಆರ್ ರಮೇಶ್ (NR Ramesh) ಹಗರಣಗಳನ್ನು ಬಯಲು ಮಾಡುವಲ್ಲಿ ಸಿದ್ಧಹಸ್ತರು. ಈ ಬಾರಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ (Siddaramaiah) ಮೇಲೆ ರೂ. 200 ಕೋಟಿ ಹಗರಣದ ಆರೋಪ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಅವರನ್ನು ಕಾಣಲೆಂದು ಕಚೇರಿಗೆ (CMO) ಬರುತ್ತಿದ್ದ ಅತಿಥಿಗಳಿಗೆ ಕಾಫಿ-ಬಿಸ್ಕತ್ತು ತಿಂಡಿ-ಉಪಚಾರದ ಲೆಕ್ಕ ತೋರಿಸಿ ಪ್ರತಿದಿನ ರೂ. 14 ಲಕ್ಷ ಖರ್ಚು ಮಾಡಲಾಗಿದೆ ಮತ್ತು ಕೇವಲ ಈ ಬಾಬತ್ತಿನಲ್ಲೇ 200 ಕೋಟಿ ರೂ. ಗಳಿಗೂ ಹೆಚ್ಚಿನ ಹಣವನ್ನು ಲೂಟಿ ಮಾಡಲಾಗಿದೆ ಎಂದು ರಮೇಶ್ ಹೇಳಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 07, 2023 11:45 AM
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು

