ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು, ಅವರು ಜಾತಿ ಗಣತಿಯನ್ನು ಒಪ್ಪಲ್ಲ: ಕೆಎನ್ ರಾಜಣ್ಣ

Updated on: Apr 15, 2025 | 5:45 PM

ಬಹಳ ವರ್ಷಗಳಿಂದ ಜನಗಣತಿಯೂ ನಡೆದಿಲ್ಲ, ಅದು ಕೊನೆ ಬಾರಿಗೆ ನಡೆದಾಗ ರಾಜ್ಯದ ಒಟ್ಟು ಜನಸಂಖ್ಯೆ ಐದೂವರೆ ಕೋಟಿಯಷ್ಟಿದ್ದಿರಬಹುದು, ಈಗ ಅದಕ್ಕೆ ಎರಡು ಕೋಟಿಗಳಷ್ಟು ಜನರ ಸೇಪರ್ಡೆಯಾಗಿದೆ, ಎಲ್ಲ ಸಸಮುದಾಯಗಳ ಬಗ್ಗೆ ಬೇಸಿಕ್ ದತ್ತಾಂಶ ಜಾತಿ ಗಣತಿಯ ಮೂಲಕ ಸಿಕ್ಕಿದೆ, ಅದನ್ನು ಆಧರಿಸಿಯೇ ತಮ್ಮ ಸರ್ಕಾರ ತೀರ್ಮಾನಗಳನ್ನು ತೆಗೆದುಕೊಳ್ಳಲಿದೆ ಎಂದು ರಾಜಣ್ಣ ಹೇಳಿದರು.

ತುಮಕೂರು, ಏಪ್ರಿಲ್ 15: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಜಾತಿ ಗಣತಿ ವರದಿ ಕಸದ ಬುಟ್ಟಿಗೆ ಎಸೆಯಲು ಲಾಯಕ್ಕು ಎಂದು ಹೇಳಿರುವುಕ್ಕೆ ನಗರದ ತಮ್ಮ ಕಚೇರಿಯಲ್ಲಿ ಪ್ರತಿಕ್ರಿಯಿಸಿದ ಸಹಕಾರ ಸಚಿವ ಕೆಎನ್ ರಾಜಣ್ಣ, ಬಿಜೆಪಿ ನಾಯಕರು ಮೀಸಲಾತಿ ವಿರೋಧಿಗಳು, ಆದರೆ ಸುಮ್ಮನೆ ಹೇಳಿಕೆ ನೀಡುವುದರಲ್ಲಿ ಅರ್ಥವಿಲ್ಲ, ತಿರಸ್ಕಾರಕ್ಕೆ ಕಾರಣ ಹೇಳಬೇಕು; ಹಾಗೆಯೇ, ವರದಿಯನ್ನು ಅಂಗೀಕರಿಸುವವರು ಯಾವ ಕಾರಣಕ್ಕೆ ಅಂಗೀಕೃತ ಅಂತ ಅಂತ ಸ್ಪಷ್ಟಪಡಿಸಬೇಕು ಎಂದರು. ಎಲ್ಲ ಅಡಿಪಾಯ ಮತ್ತು ಅಂಶಗಳನ್ನು ಪರಿಗಣಿಸಿ ಯಾವ ಸಮುದಾಯಕ್ಕೂ ಅನ್ಯಾಯವಾಗದಂತೆ ನೋಡಿಕೊಳ್ಳಲು ತಮ್ಮ ಸರ್ಕಾರ ಬದ್ಧವಾಗಿದೆ ಎಂದು ರಾಜಣ್ಣ ಹೇಳಿದರು.

ಇದನ್ನೂ ಓದಿ:   ಹನಿ ಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆ ಮಾಡ್ತಿರೋದ್ರಿಂದ ಹೇಳಿಕೆ ನೀಡುವುದು ಸರಿಯಲ್ಲ: ಕೆಎನ್ ರಾಜಣ್ಣ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More