ವಕ್ಫ್ ಜಮೀನು ವಿವಾದ: ವಿಜಯಪುರದಲ್ಲಿ ಮುಂದುವರಿದ ಬಿಜೆಪಿ ನಾಯಕರ ಅಹೋರಾತ್ರಿ ಹೋರಾಟ

Updated on: Nov 06, 2024 | 11:23 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ರೈತರಿಗೆ ನೀಡಿರುವ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುತ್ತಿದೆ ಎಂದು ಹೇಳಿದ್ದಾರೆ. ಪ್ರತಿಭಟನೆಕಾರರು ಕೇವಲ ನೋಟೀಸಲ್ಲ ಗೆಜೆಟ್ ನೋಟಿಫಿಕೇಶನ್ ಅನ್ನು ರದ್ದು ಮಾಡಬೇಕೆಂದು ಹೇಳುತ್ತಿದ್ದಾರೆ.

ವಿಜಯಪುರ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಸ್ಥಳೀಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ಬಿಜೆಪಿ ಮುಖಂಡರು ರೈತರ ಮತ್ತು ಜಿಲ್ಲೆಯ ಇತರ ಜಮೀನು ದಾಖಲೆಗಳಲ್ಲಿ ವಕ್ಫ್ ಆಸ್ತಿ ಎಂದು ನಮೂದಿಸಿರುವುದನ್ನು ಖಂಡಿಸಿ ನಡೆಸುತ್ತಿರುವ ಅನಿರ್ಧಾಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಮೂರನೇ ದಿನವೂ ಮುಂದುವರಿದಿದೆ. ಸತ್ಯಾಗ್ರಹಕ್ಕಾಗಿ ನಿರ್ಮಿಸಿದ ಟೆಂಟ್​ನಲ್ಲೇ ಕಳೆದ ರಾತ್ರಿ ಯತ್ನಾಳ್ ಮತ್ತು ಇತರ ಮುಖಂಡರು ಊಟ ಮಾಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕರ್ನಾಟಕದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಸಿದ್ದರಾಮಯ್ಯ ಸಿಎಂ ಆದಮೇಲೆ ಹಿಟ್ಲರ್ ಆಗಿದ್ದಾರೆ: ಶೋಭಾ ಕರಂದ್ಲಾಜೆ ವಾಗ್ದಾಳಿ

Published on: Nov 06, 2024 10:32 AM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More