ಕೋಲಾರದಲ್ಲಿ ಪ್ರಧಾನಿ ಮೋದಿಗೆ ಕಂಬಳಿ ಹೊದಿಸಿ ವಿಶೇಷ ಉಡುಗೊರೆ ನೀಡಿ ಸನ್ಮಾನ

Updated on: Apr 30, 2023 | 12:36 PM

ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಮೋದಿ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದರು. ಅಲ್ಲದೇ ಕೇಸರಿ ಪೇಟ ತೊಡಸಿ ಬುದ್ಧನ ವಿಗ್ರಹವನ್ನು ಉಡುಗೊರೆ ನೀಡಿದರು.

ಕರುನಾಡ ಕುರುಕ್ಷೇತ್ರಕ್ಕೆ ರಗಡ್ ಎಂಟ್ರಿ ಕೊಟ್ಟಿರೋ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವೇ ಮತಭೂಮಿಯಲ್ಲಿ ರಣಕಹಳೆ ಮೊಳಗಿಸಿದ್ದಾರೆ. ಇಷ್ಟು ದಿನ ಒಂದ್ ಲೆಕ್ಕ ಇನ್ಮುಂದೆ ಒಂದ್ ಲೆಕ್ಕ ಎನ್ನುವಂತೆ, ಬೀದರ್, ವಿಜಯಪುರ, ಬೆಳಗಾವಿ, ಬೆಂಗಳೂರು ಹೀಗೆ ಒಂದೇ ದಿನ ಉತ್ತರದಿಂದ ದಕ್ಷಿಣದವರೆಗೂ ಸಂಚರಿಸಿ ಸಂಚಲನವನ್ನೇ ಸೃಷ್ಟಿಸಿದ್ದಾರೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳಿಗೆ ಚಾಟಿ ಬೀಸುತ್ತಲೇ ಘೋಷಣೆಗಳ ಬಾಣ ಬಿಟ್ಟಿದ್ದಾರೆ. ಎರಡನೇ ದಿನವಾದ ಇಂದು(ಏಪ್ರಿಲ್ 30) ಕೋಲಾರಿಂದ ಮೋದಿ ಪ್ರಚಾರ ಆರಂಭಿಸಿದ್ದು, ಕೋಲಾರದ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ಕೋರಿದರು. ಇನ್ನು ಇದೇ ವೇಳೆ ಕೋಲಾರ ಬಿಜೆಪಿ ಅಭ್ಯರ್ಥಿ ವರ್ತೂರ್ ಪ್ರಕಾಶ್​ ಮೋದಿ ಅವರಿಗೆ ಕಂಬಳಿ ಹೊದಿಸಿ ಸನ್ಮಾನಿಸಿದರು. ಅಲ್ಲದೇ ಕೇಸರಿ ಪೇಟ ತೊಡಸಿ ಬುದ್ಧನ ವಿಗ್ರಹವನ್ನು ಉಡುಗೊರೆ ನೀಡಿದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More