ಬಿಜೆಪಿ ಕಾರ್ಯಕರ್ತರು ನನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದಾರೆ, ಯಾವುದೇ ಗೊಂದಲವಿಲ್ಲ: ಪ್ರಜ್ವಲ್ ರೇವಣ್ಣ

Updated on: Feb 06, 2024 | 1:44 PM

ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಕೇಂದ್ರಗಳಲ್ಲಿ ಎರಡೂ ಪಕ್ಷಗಳ ನಾಯಕನ್ನು ಮಾತಾಡಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಹಾಗೆಯೇ, ಪಕ್ಷದ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ತಾಲ್ಲೂಕುಮಟ್ಟದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪ್ರಜ್ವಲ್ ಹೇಳಿದರು.

ಹಾಸನ: ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಹೇಳೋದನ್ನು ಕೇಳಿದರೆ, ಈ ಬಾರಿಯ ಲೊಕಸಭಾ ಚುನಾವಣೆಯಲ್ಲಿ (Lok Sabha) ಹಾಸನ ಕ್ಷೇತ್ರಕ್ಕೆ ಅವರೇ ಬಿಜೆಪಿ-ಜೆಡಿಎಸ್ ಮೈತ್ರಿ ಅಥವಾ ಎನ್ ಡಿಎ (NDA) ಅಭ್ಯರ್ಥಿಯಾಗಲಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಪ್ರಜ್ವಲ್, ಬಿಜೆಪಿ ಮತ್ತು ಜೆಡಿಎಸ್ ಮುಖಂಡರ ನಡುವೆ ಯಾವುದೇ ಗೊಂದಲವಿಲ್ಲ, ಅಸಲಿಗೆ ಬಿಜೆಪಿ ಧುರೀಣರು ತನ್ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಕ್ಷೇತ್ರದ ಯಾವ್ಯಾವ ಅಂಶಗಳನ್ನು ಕೈಗೆತ್ತಿಕೊಳ್ಳಬೇಕೆಂದು ಹೇಳುತ್ತಿದ್ದಾರೆ. ಅವರೊಂದಿಗೆ ಎಲ್ಲ ಜೆಡಿಎಸ್ ನಾಯಕರ ಆಸೆ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನೋಡುವುದಾಗಿದೆ ಎಂದು ಹೇಳಿದರು. ಪಕ್ಷದ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಜಿಲ್ಲಾ ಕೇಂದ್ರಗಳಲ್ಲಿ ಎರಡೂ ಪಕ್ಷಗಳ ನಾಯಕನ್ನು ಮಾತಾಡಿಸಿ ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ಹಾಗೆಯೇ, ಪಕ್ಷದ ಅಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ, ತಾಲ್ಲೂಕುಮಟ್ಟದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ಪ್ರಜ್ವಲ್ ಹೇಳಿದರು. ಸಂಸತ್ತಿನ ಅಧಿವೇಶನದ ಬಳಿಕ ಸೀಟು ಹೊಂದಾಣಿಕೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಸಂಸದ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More