ಪ್ರಜ್ವಲ್ ರೇವಣ್ಣ ನಮ್ಮ ಕುಟುಂಬದವನು, ಬಿಜೆಪಿ ನಾಯಕರ‍್ಯಾಕೆ ಅವನ ಬಗ್ಗೆ ಮಾತಾಡುತ್ತಾರೆ? ಹೆಚ್ ಡಿ ಕುಮಾರಸ್ವಾಮಿ

|

Updated on: May 04, 2024 | 12:41 PM

ಬಿಸಿಲಿನಿಂದ ಧಗಧಗಿಸುತ್ತಿರುವ ಕಲಬುರಗಿಯಲ್ಲಿ ಸ್ಥಿತಿ ಭಿನ್ನವಾಗಿರಲಿಲ್ಲ. ಪ್ರಕರಣದಲ್ಲಿ ಕೇವಲ ಕುಮಾರಸ್ವಾಮಿ ಮಾತ್ರ ಮಾತಾಡುತ್ತಿದ್ದಾರೆ, ಬಿಜೆಪಿ ನಾಯಕರು ಯಾಕೆ ಮಾತಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿರುವ ಪ್ರಶ್ನೆಗೆ ಅವರು, ಪ್ರಜ್ವಲ್ ತನ್ನ ಕುಟುಂಬಕ್ಕೆ ಸೇರಿದವನು, ಅವನ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತಾಡುತ್ತಾರೆ? ಎಂದರು.

ಕಲಬುರಗಿ: ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ (Umesh Jadhav) ಪರ ಪ್ರಚಾರ ಮಾಡಲು ನಗರಕ್ಕೆ ಬಂದಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿಯವರು (HD Kumaraswamy) ಪತ್ರಿಕಾ ಗೋಷ್ಟಿಯೊಂದನ್ನು ನಡೆಸಿ ಮಾತಾಡಿದರು. ಅವರು ಹೋದೆಡೆಯೆಲ್ಲ ಪ್ರಜ್ವಲ್ ರೇವಣ್ಣ (Prajwal Revanna) ಪ್ರಕರಣಕ್ಕೆ ಸಂಬಂಧಿಸಿದ ಪ್ರಶ್ನೆಗಳು ಹಿಂಬಾಲಿಸುತ್ತಿವೆ. ಬಿಸಿಲಿನಿಂದ ಧಗಧಗಿಸುತ್ತಿರುವ ಕಲಬುರಗಿಯಲ್ಲಿ ಸ್ಥಿತಿ ಭಿನ್ನವಾಗಿರಲಿಲ್ಲ. ಪ್ರಕರಣದಲ್ಲಿ ಕೇವಲ ಕುಮಾರಸ್ವಾಮಿ ಮಾತ್ರ ಮಾತಾಡುತ್ತಿದ್ದಾರೆ, ಬಿಜೆಪಿ ನಾಯಕರು ಯಾಕೆ ಮಾತಾಡುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರು ಕೇಳುತ್ತಿರುವ ಪ್ರಶ್ನೆಗೆ ಅವರು, ಪ್ರಜ್ವಲ್ ತನ್ನ ಕುಟುಂಬಕ್ಕೆ ಸೇರಿದವನು, ಅವನ ಬಗ್ಗೆ ಬಿಜೆಪಿ ನಾಯಕರು ಯಾಕೆ ಮಾತಾಡುತ್ತಾರೆ? ಎಂದರು. ಕುಮಾರಸ್ವಾಮಿ ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ಮಾನಸಿಕ ಸ್ಥಿತಿ ಕಳೆದುಕೊಂಡಿರುವುದಕ್ಕೆ ಹೀಗೆ ಮಾತಾಡುತ್ತಿರೋದು ಎನ್ನುತ್ತಾ ಅಲ್ಲಿಂದ ಎದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಪ್ರಜ್ವಲ್ ರೇವಣ್ಣ ಪ್ರಕರಣಲ್ಲಿ ದೇವೇಗೌಡ ಮತ್ತು ನನ್ನ ವಿರುದ್ಧ ಯಾಕೆ ಮೀಡಿಯ ಟ್ರಯಲ್? ಹೆಚ್ ಡಿ ಕುಮಾರಸ್ವಾಮಿ

Follow us on