ರಾಜ್ಯದ ರಾಜಕೀಯ ಪರಿಸರವನ್ನು ಕಲುಷಿತಗೊಳಿಸಿದ್ದೇ ಬಿಜೆಪಿ ನಾಯಕರು: ಪುಟ್ಟರಂಗಶೆಟ್ಟಿ, ಶಾಸಕ

Updated on: Aug 30, 2024 | 2:19 PM

ಶಾಸಕರ ಖರೀದಿಗೆ ₹100 ಕೋಟಿ ನೀಡುವುದು ಬಿಜೆಪಿಯವರಿಗೆ ಹೊಸತೇನಲ್ಲ ಎನ್ನುವ ಪುಟ್ಟರಂಗಶೆಟ್ಟಿ, ತನ್ನನ್ನು ಸಂಪರ್ಕಿಸುವ ಸಾಹಸ ಇದುವರೆಗೆ ಅವರು ಮಾಡಿಲ್ಲ, ಆಫರ್ ತೆಗೆದುಕೊಂಡು ತನ್ನಲ್ಲಿಗೇನಾದರೂ ಬಂದರೆ ಅವರ ಗ್ರಹಚಾರ ಬಿಡಿಸುವುದಾಗಿ ನಗುತ್ತಾ ಹೇಳಿದರು.

ಚಾಮರಾಜನಗರ: ರಾಜ್ಯದ ರಾಜಕೀಯವನ್ನು ಕಲುಷಿತಗೊಳಿಸಿದ್ದೇ ಬಿಜೆಪಿ ನಾಯಕರು, 2008ರಿಂದ ಅವರು ಬೇರೆ ಪಕ್ಷಗಳ ಶಾಸಕರನ್ನು ಖರೀದಿ ಮಾಡುವ ಕೆಲಸ ಶುರುಮಾಡಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಸಿ ಪುಟ್ಟರಂಗಶೆಟ್ಟಿ ಹೇಳಿದರು. ಬಿಜೆಪಿಯ ಯಾವುದಾದರೂ ನಾಯಕ ಮುಂಬಾಗಿಲಿಂದ ಬಂದ ಮುಖ್ಯಮಂತ್ರಿಯಾಗಿರುವ ನಿದರ್ಶನವಿದೆಯೇ? ಎಲ್ಲರೂ ಹಿಂಬಾಗಿಲಿನಿಂದ ಬಂದು ರಾಜ್ಯದ ಚುಕ್ಕಾಣಿ ಹಿಡಿದವರು ಎಂದು ಶಾಸಕ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಇದನ್ನೂ ಓದಿ:  ಮುಸ್ಲಿಮರ ಓಲೈಕೆ, ಹಿಂದೂ ಕಡೆಗಣನೆ ನೋಡಿ ಶೆಟ್ಟರ್ ವಾಪಸ್​ -ಇದು ಆಪರೇಷನ್ ಕಮಲ ಅಲ್ಲ ಎಂದ ಆರ್. ಅಶೋಕ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More