AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಐವಾನ್ ಡಿಸೋಜಾ ವಿರುದ್ಧ ಎಫ್​ಐಅರ್ ದಾಖಲಾಗದ್ದನ್ನು ಖಂಡಿಸಿ ಬಿಜೆಪಿ ನಾಯಕರ ಧರಣಿ

ಮಂಗಳೂರು: ಐವಾನ್ ಡಿಸೋಜಾ ವಿರುದ್ಧ ಎಫ್​ಐಅರ್ ದಾಖಲಾಗದ್ದನ್ನು ಖಂಡಿಸಿ ಬಿಜೆಪಿ ನಾಯಕರ ಧರಣಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Aug 28, 2024 | 7:23 PM

Share

ಧರಣಿ ನಡೆಸುತ್ತಿದ್ದಾಗ ಮತ್ತು ಪೊಲೀಸರು ವಶಕ್ಕೆ ಪಡೆದ ನಂತರವೂ ಬಿಜೆಪಿ ಮುಖಂಡರು ಐವಾನ್ ಡಿಸೋಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಎರಡು ದಿನಗಳ ಹಿಂದೆ ಡಿಸೋಜಾ ಅವರ ಮನೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು.

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರೂ ಇದುವರೆಗೆ ಅವರ ವಿರುದ್ಧ ಎಫ್ಐಅರ್ ದಾಖಲಾಗದಿರುವುದನ್ನು ಪ್ರತಿಭಟಿಸಿ ಬಿಜೆಪಿ ನಾಯಕರು ಇಂದು ನಗರದ ಪಿವಿಎಸ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರನ್ನು ಬಲವಂತದಿಂದ ವಶಕ್ಕೆ ಪಡೆದು ಬಸ್ ಹತ್ತಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಪ್ರತಿಭಟನೆಗಿಳಿದಾಗ ಶಿವಕುಮಾರ್ ಜೊತೆ ವಿಜಯೇಂದ್ರ ಹರಟೆಗೆ ಕೂತಿದ್ದು ನಾಚಿಕೆಗೇಡು: ಬಸನಗೌಡ ಯತ್ನಾಳ್