ಮಂಗಳೂರು: ಐವಾನ್ ಡಿಸೋಜಾ ವಿರುದ್ಧ ಎಫ್​ಐಅರ್ ದಾಖಲಾಗದ್ದನ್ನು ಖಂಡಿಸಿ ಬಿಜೆಪಿ ನಾಯಕರ ಧರಣಿ

|

Updated on: Aug 28, 2024 | 7:23 PM

ಧರಣಿ ನಡೆಸುತ್ತಿದ್ದಾಗ ಮತ್ತು ಪೊಲೀಸರು ವಶಕ್ಕೆ ಪಡೆದ ನಂತರವೂ ಬಿಜೆಪಿ ಮುಖಂಡರು ಐವಾನ್ ಡಿಸೋಜಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದರು. ಎರಡು ದಿನಗಳ ಹಿಂದೆ ಡಿಸೋಜಾ ಅವರ ಮನೆಯ ಮೇಲೆ ಕೆಲವು ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದರು.

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ರಾಜ್ಯಪಾಲರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದರೂ ಇದುವರೆಗೆ ಅವರ ವಿರುದ್ಧ ಎಫ್ಐಅರ್ ದಾಖಲಾಗದಿರುವುದನ್ನು ಪ್ರತಿಭಟಿಸಿ ಬಿಜೆಪಿ ನಾಯಕರು ಇಂದು ನಗರದ ಪಿವಿಎಸ್ ಜಂಕ್ಷನ್ ಬಳಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮತ್ತು ಶಾಸಕ ವೇದವ್ಯಾಸ ಕಾಮತ್ ಅವರನ್ನು ಬಲವಂತದಿಂದ ವಶಕ್ಕೆ ಪಡೆದು ಬಸ್ ಹತ್ತಿಸುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಬಿಜೆಪಿ ಪ್ರತಿಭಟನೆಗಿಳಿದಾಗ ಶಿವಕುಮಾರ್ ಜೊತೆ ವಿಜಯೇಂದ್ರ ಹರಟೆಗೆ ಕೂತಿದ್ದು ನಾಚಿಕೆಗೇಡು: ಬಸನಗೌಡ ಯತ್ನಾಳ್

Follow us on