AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿಯವರು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಬದಲಾವಣೆ ಗಡುವು ಫಿಕ್ಸ್ ಮಾಡುತ್ತಾರೆ: ಲಕ್ಷ್ಮಣ ಸವದಿ

ಬಿಜೆಪಿಯವರು ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಸಿಎಂ ಬದಲಾವಣೆ ಗಡುವು ಫಿಕ್ಸ್ ಮಾಡುತ್ತಾರೆ: ಲಕ್ಷ್ಮಣ ಸವದಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Nov 09, 2024 | 1:55 PM

ಹಬ್ಬಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ನಾಯಕರು ಮುಖ್ಯಮಂತ್ರಿ ಬದಲಾವಣೆಯ ಗಡುವು ಫಿಕ್ಸ್ ಮಾಡುತ್ತಾ ಹೋಗುತ್ತಾರೆ, ಮುಂದಿನ ಮೂರೂವರೆ ವರ್ಷಗಳ ಕಾಲ ಅವರು ಇದನ್ನೇ ಮಾಡಲಿದ್ದಾರೆ ಮತ್ತು ನಂತರ ಚುನಾಅವಣೆ ನಡೆದು ಪುನಃ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೂ ಇದನ್ನೇ ಮುಂದುವರಿಸಲಿದ್ದಾರೆ ಎಂದು ಸವದಿ ಹೇಳಿದರು.

ಹುಬ್ಬಳ್ಳಿ: ಐದಾರು ತಿಂಗಳು ಹಿಂದೆ ಆಡಿದ ಮಾತನ್ನೇ ಅಥಣಿ ಶಾಸಕ ಲಕ್ಷ್ಮಣ ಸವದಿ ಮತ್ತೊಮ್ಮೆ ಆಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಉಪ ಚುನಾವಣೆಯ ನಂತರ ಒಂದಷ್ಟು ಬಿಜೆಪಿ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಬರಲಿದ್ದಾರೆ, ಅವರ ಹೆಸರು ಮತ್ತು ವಿವರಗಳನ್ನು ಬಹಿರಂಗಪಡಿಸಲಾಗಲ್ಲ, ಬಿಜೆಪಿಯಲ್ಲಿರುವ ತನ್ನ ಸ್ನೇಹಿತರು ಸಂಪರ್ಕದಲ್ಲಿದ್ದಾರೆ, ಹೈಕಮಾಂಡ್ ಜೊತೆ ಚರ್ಚಿಸಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ನಾನು ಕಾಂಗ್ರೆಸ್ ಪಕ್ಷಕ್ಕೆ ವಾಪಸ್ಸಾಗಲು ಲಕ್ಷ್ಮಣ ಸವದಿ ಕಾರಣ: ಕರಡಿ ಸಂಗಣ್ಣ, ಮಾಜಿ ಬಿಜೆಪಿ ಸಂಸದ