Former MLA blames partymen; ಕೆಲ ಬಿಜೆಪಿ ನಾಯಕರ ಹೊಂದಾಣಿಕೆ ರಾಜಕಾರಣವೇ ಪಕ್ಷದ ಸೋಲಿಗೆ ಕಾರಣವಾಯಿತು: ಸಿಟಿ ರವಿ

Updated on: Jun 09, 2023 | 5:04 PM

ಪತ್ರಕರ್ತರೊಬ್ಬರು ಆ ನಾಯಕರ ಹೆಸರು ಹೇಳಬಹುದಾ ಅಂತ ಪ್ರಶ್ನಿಸಿದಾಗ, ಹಾಗೆಲ್ಲ ಬಹಿರಂಗಪಡಿಸಲಾಗದು ಎಂದು ಅವರು ಹೇಳಿದರು.

ನವದೆಹಲಿ: ಮಾಜಿ ಶಾಸಕ ಮತ್ತು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿಟಿ ರವಿ (CT Ravi), ಕರ್ನಾಟಕದಲ್ಲಿ ಪಕ್ಷದ ಸೋಲಿನ ನಂತರ ಆತ್ಮಾವಲೋಕನ (retrospection) ಮಾಡಿಕೊಂಡಂತಿದೆ. ಇಂದು ನವದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಹಲವಾರು ವಿಷಯಗಳ ಬಗ್ಗೆ ಮಾತಾಡಿದ ರವಿ, ಬಿಜೆಪಿ ಸೋಲಿಗೆ ಪಕ್ಷದ ಕೆಲ ನಾಯಕರ ಹೊಂದಾಣಿಕೆ (adjustment) ಮತ್ತು ರಾಜಿ ರಾಜಕಾರಣ ಕಾರಣವಾಯಿತು ಎಂದು ಹೇಳಿದರು. ಆಗಲೇ ಆ ನಾಯಕರನ್ನು ಬೀದಿಗೆ ತಂದು ನಿಲ್ಲಿಸಿದ್ದರೆ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳುವಂಥ ಸ್ಥಿತಿ ಬರುತ್ತಿರಲಿಲ್ಲ ಎಂದು ರವಿ ಹೇಳಿದರು. ಪತ್ರಕರ್ತರೊಬ್ಬರು ಆ ನಾಯಕರ ಹೆಸರು ಹೇಳಬಹುದಾ ಅಂತ ಪ್ರಶ್ನಿಸಿದಾಗ, ಹಾಗೆಲ್ಲ ಬಹಿರಂಗಪಡಿಸಲಾಗದು ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More