AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BJP under fire: ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಆಗಲಾರದೇನೋ? ಲಕ್ಷ್ಮಣ್ ಸವದಿ

ತಮ್ಮ ಪಕ್ಷದಿಂದ ಮುಖ್ಯಮಂತ್ರಿಯ ಆಯ್ಕೆ ಮತ್ತು ಸಚಿವ ಸಂಪುಟದ ರಚನೆ ವಿಳಂಬವಾದಾಗ ಬಿಜೆಪಿ ನಾಯಕರು ಬಹಳ ಟೀಕೆ ಮಾಡಿದರು ಎಂದು ಸವದಿ ಹೇಳಿದರು.

BJP under fire: ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಆಗಲಾರದೇನೋ? ಲಕ್ಷ್ಮಣ್ ಸವದಿ
ಲಕ್ಷ್ಮಣ ಸವದಿ
ಅರುಣ್​ ಕುಮಾರ್​ ಬೆಳ್ಳಿ
|

Updated on: Jul 03, 2023 | 6:33 PM

Share

ಬೆಂಗಳೂರು: ರಾಜ್ಯ ವಿಧಾನ ಸಭೆಯಲ್ಲಿ ವಿರೋಧ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷ ಬಜೆಟ್ ಅಧಿವೇಶನ (Budget Session) ಶುರುವಾದರೂ ಸದನದಲ್ಲಿ ತನ್ನ ನಾಯಕನನ್ನು ಆಯ್ಕೆ ಮಾಡಿಕೊಳ್ಳದಿರುವುದು ಆಡಳಿತ ಪಕ್ಷದ ಶಾಸಕರಿಂದ ಗೇಲಿಗೊಳಗಾಗುತ್ತಿದೆ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ಲಕ್ಷ್ಮಣ್ ಸವದಿ (Laxman Savadi), ತಮ್ಮ ಪಕ್ಷದಿಂದ ಮುಖ್ಯಮಂತ್ರಿಯ ಆಯ್ಕೆ ಮತ್ತು ಸಚಿವ ಸಂಪುಟದ ರಚನೆ ವಿಳಂಬವಾದಾಗ ಬಿಜೆಪಿ ನಾಯಕರು ಬಹಳ ಟೀಕೆ ಮಾಡಿದರು. ಮಂತ್ರಿಮಂಡಲ ರಚನೆ (cabinet formation) ಒಂದು ಕ್ಲಿಷ್ಟಕರವಾದ ವಿಚಾರ, ಯಾಕೆಂದರೆ ಸಾಮಾಜಿಕ ನ್ಯಾಯ, ಜಿಲ್ಲಾವಾರು ಪ್ರಾತಿನಿಧ್ಯ, ಸಮುದಾಯ-ಜಾತಿಗಳ ಆದ್ಯತೆ ಮೊದಲಾದ ಸಂಗತಿಗಳನ್ನು ಪರಿಗಣಿಸಬೇಕಾಗುತ್ತದೆ ಎಂದು ಸವದಿ ಹೇಳಿದರು. ಬಿಜೆಪಿ ಇದ್ಯಾವುದೂ ಮಾಡಬೇಕಿಲ್ಲವಾದರೂ ಶಾಸಕಾಂಗ ಪಕ್ಷದ ನಾಯಕನ ಆರಿಸಲು ಒಂದೂವರೆ ತಿಂಗಳಿಂದ ಕಸರತ್ತು ನಡೆಸಿದ್ದಾರೆ. ಬಿಎಸ್ ಯಡಿಯೂರಪ್ಪ 2-3 ದಿನ ಅಂತ ಹೇಳುತ್ತಿದ್ದಾರೆ, ಆದರೆ ಬಜೆಟ್ ಅಧಿವೇಶನ ಮುಗಿದರೂ ವಿರೋಧ ಪಕ್ಷ ನಾಯಕನ ಆಯ್ಕೆ ಲಕ್ಷಣಗಳು ಕಾಣುತ್ತಿಲ್ಲ ಎಂದು ಲಕ್ಷ್ಮಣ ಸವದಿ ಮೂದಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ