AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ

ರಾಹುಲ್ ಗಾಂಧಿಯ ಪ್ರತಿಕೃತಿ ದಹನದ ವೇಳೆ ಬಿಜೆಪಿ ಶಾಸಕಿಗೆ ಗಾಯ

ಸುಷ್ಮಾ ಚಕ್ರೆ
|

Updated on: Apr 25, 2026 | 7:12 PM

Share

ಬಹ್ರೈಚ್ ನಗರದಲ್ಲಿ ಪ್ರತಿಕೃತಿ ದಹನ ಮಾಡಿ ಪ್ರತಿಭಟನೆ ನಡೆಸುವಾಗ ಬಿಜೆಪಿ ಶಾಸಕಿಯೊಬ್ಬರು ಗಾಯಗೊಂಡಿದ್ದಾರೆ. ಪ್ರತಿಕೃತಿ ಸುಡುವಾಗ ಸುಟ್ಟ ಗಾಯಗಳಿಗೆ ಒಳಗಾದಾಗ ಗದ್ದಲ ಭುಗಿಲೆದ್ದಿತು. ಅವರನ್ನು ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು. ಅಲ್ಲಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೂವರು ವೈದ್ಯರ ತಂಡವು ಅವರಿಗೆ ಚಿಕಿತ್ಸೆ ನೀಡುತ್ತಿದೆ. ಈ ಘಟನೆಯ ವಿಡಿಯೋ ಇಲ್ಲಿದೆ.

ನವದೆಹಲಿ, ಏಪ್ರಿಲ್ 25: ಉತ್ತರ ಪ್ರದೇಶದ ಬಹ್ರೈಚ್‌ನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು (Women’s Reservation Bill) ಬೆಂಬಲಿಸಿ ನಡೆದ ಬಿಜೆಪಿ ರ್ಯಾಲಿಯಲ್ಲಿ ಪ್ರತಿಕೃತಿ ದಹನ ಮಾಡುವಾಗ ಸದರ್ ಶಾಸಕಿ ಅನುಪಮಾ ಜೈಸ್ವಾಲ್ ಅವರ ಮೈಗೆ ಸ್ವಲ್ಪ ಬೆಂಕಿ ತಾಗಿದೆ. ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಗಂಭೀರ ಹಾನಿಯಿಂದ ಪಾರಾಗಿದ್ದಾರೆ. ನಾರಿ ವಂದನ್ ಕಾಯ್ದೆ ಅಭಿಯಾನದಡಿ ಈ ರ್ಯಾಲಿಯನ್ನು ಆಯೋಜಿಸಲಾಗಿತ್ತು. ಹೆಚ್ಚಿನ ಸಂಖ್ಯೆಯ ಮಹಿಳೆಯರು ಭಾಗವಹಿಸಿ ವಿರೋಧ ಪಕ್ಷಗಳ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಸಮಯದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರ ಪ್ರತಿಕೃತಿಗಳಿಗೆ ಬೆಂಕಿ ಹಚ್ಚಲಾಯಿತು. ಈ ವೇಳೆ ಪ್ರತಿಕೃತಿಯ ಜ್ವಾಲೆಗಳು ಅನಿರೀಕ್ಷಿತವಾಗಿ ತೀವ್ರಗೊಂಡು ಅನುಪಮಾ ಜೈಸ್ವಾಲ್ ಅವರಿಗೂ ಬೆಂಕಿ ತಾಗಿತು. ಅವರಿಗೆ ಸಣ್ಣಪುಟ್ಟ ಸುಟ್ಟ ಗಾಯಗಳಾಗಿದ್ದು, ಮುನ್ನೆಚ್ಚರಿಕೆಯಾಗಿ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಯಾವುದೇ ಗಂಭೀರ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us