ರೈತರು ಸಾವಿಗೆ ಶರಣಾಗುತ್ತಿರುವ ಬಗ್ಗೆ ಶಿವಕುಮಾರ್, ಇನ್ನೊಬ್ಬ ಮಂತ್ರಿ ಬೇಜವಾಬ್ದಾರಿ ಹೇಳಿಕೆ ನೀಡುತ್ತಿದ್ದಾರೆ: ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Sep 08, 2023 | 2:52 PM

ತೀರ ಹತಾಷ ಸ್ಥಿತಿ ತಲುಪಿದಾಗ, ಬದುಕಲು ಮಾರ್ಗೋಪಾಯವೇ ಕಾಣದಾದಾಗ ರೈತ ಸಾವಿಗೆ ಶರಣಾಗುತ್ತಾನೆ ದುಡ್ಡಿನಾಸೆಗಾಗಿ ಅಲ್ಲ ಎಂದ ಯತ್ನಾಳ್, ಆ ಮಂತ್ರಿಗೆ ತಾನು ರೂ. 5 ಕೋಟಿ ನೀಡುತ್ತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಸವಾಲೆಸೆದರು. ಶಿವಕುಮಾರ್ ಸ್ಥಿತಿವಂತರಾಗಿರುವುದರಿಂದ ಅವರಿಗೆ ರೂ. 25 ಕೋಟಿ ನೀಡುತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಹೇಳಿದರು

ರಾಯಚೂರು: ರೈತರ ಆತ್ಮಹತ್ಯೆಯಂಥ ಅತ್ಯಂತ ಗಂಭೀರ ಮತ್ತು ಸಂವೇದ ಶೀಲ ವಿಷಯದ ಬಗ್ಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಮತ್ತು ವಿಜಯಪುರದ ಒಬ್ಬ ಸಚಿವ ಹಗುರವಾಗಿ, ಉಡಾಫೆ ಮತ್ತು ಬೇಜವಾಬ್ದಾರಿ ಹೇಳಿಕೆ ನೀಡುತ್ತಿರವುದು ಗಾಬರಿ ಹುಟ್ಟಿಸುತ್ತದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದರು. ವಿಜಯಪುರದ ಮಂತ್ರಿಯೊಬ್ಬ (ಮಂತ್ರಿಯ ಹೆಸರು ಹೇಳಲಿಲ್ಲ) ಆತ್ಮಹತ್ಯೆ ಮಾಡಿಕೊಂಡರೆ ಕುಟುಂಬಕ್ಕೆ ಸರ್ಕಾರದಿಂದ ರೂ. 5 ಲಕ್ಷ ಪರಿಹಾರ (compensation) ಸಿಗುತ್ತದೆ ಎಂಬ ಕಾರಣಕ್ಕೆ ರೈತ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಅಂತ ಹೇಳುತ್ತಾನೆ ಅಂತ ಯತ್ನಾಳ್ ಹೇಳಿದರು. ತೀರ ಹತಾಷ ಸ್ಥಿತಿ ತಲುಪಿದಾಗ, ಬದುಕಲು ಮಾರ್ಗೋಪಾಯವೇ ಕಾಣದಾದಾಗ ರೈತ ಸಾವಿಗೆ ಶರಣಾಗುತ್ತಾನೆ ದುಡ್ಡಿನಾಸೆಗಾಗಿ ಅಲ್ಲ ಎಂದ ಯತ್ನಾಳ್, ಆ ಮಂತ್ರಿಗೆ ತಾನು ರೂ. 5 ಕೋಟಿ ನೀಡುತ್ತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಸವಾಲೆಸೆದರು. ಶಿವಕುಮಾರ್ ಸ್ಥಿತಿವಂತರಾಗಿರುವುದರಿಂದ ಅವರಿಗೆ ರೂ. 25 ಕೋಟಿ ನೀಡುತ್ತೇನೆ, ಆತ್ಮಹತ್ಯೆ ಮಾಡಿಕೊಳ್ಳಲಿ ಅಂತ ಹೇಳಿದರು. 135 ಸ್ಥಾನಗಳನ್ನು ಗೆದ್ದ ಕಾರಣ ಕಾಂಗ್ರೆಸ್ ನಾಯಕರಿಗೆ ಅಹಂಕಾರ ತಲೆಗೇರಿದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.