MLA mocks LOP : ಕೇಂದ್ರ ಹಾಗೂ ರಾಜ್ಯ ಸರ್ಕಾರ ಫಲಾನುಭವಿಗಳ ಸಮಾವೇಶದಲ್ಲಿ ಸಿದ್ದರಾಮಯ್ಯರನ್ನು ಅಣಕಿಸಿದ ಬಸನಗೌಡ ಯತ್ನಾಳ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 18, 2023 | 5:08 PM

ಮುಂದುವರಿದು ಮಾತಾಡಿದ ಯತ್ನಾಳ್, ಪ್ರಧಾನ ಮಂತ್ರಿ ನರೇಂದ್ರ ಮೋದಿ ಒಂದು ಬಟನ್ ಒತ್ತಿದರೆ ಎಲ್ಲರ ಖಾತೆಗಳಿಗೆ ರೂ 100 ಜಮೆಯಾಗುತ್ತದೆ ಎಂದರು. ಹೇಗೆ ಅಂತ ವಿವರಿಸಲಿಲ್ಲ.    

ವಿಜಯಪುರ: ನಗರದಲ್ಲಿ ಇಂದು ಅಯೋಜಿಸಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತಾಡಿದ ಸ್ಥಳೀಯ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಕಾಂಗ್ರೆಸ್ ಪಕ್ಷ್ದದ ನಾಯಕ ಸಿದ್ದರಾಮಯ್ಯರನ್ನು (Siddaramaiah) ಅಣಕಿಸುತ್ತಾ ಮಾತಾಡಿದರು. ಕಾಂಗ್ರೆಸ್ ಪಕ್ಷ 200 ಯುನಿಟ್ ಉಚಿತ ವಿದ್ಯುತ್, ಗೃಹಿಣಿಯರಿಗೆ ತಿಂಗಳಿಗೆ ರೂ. 2,000 ಸಹಾಯ ಧನ ಮತ್ತು ಪ್ರತಿ ಮನೆಗೆ ಹತ್ತು ಕೇಜಿ ಅಕ್ಕಿ ಕೊಡುವ ಭರವಸೆ ನೀಡಿದೆ ಮತ್ತು ಅದರ ವಿಡಿಯೋ ತಯಾರಿಸಿ ಕಾರ್ಯಕರ್ತರಿಗೆ ತಲುಪಿಸಿದೆ. ವಿಡಿಯೋ ದಲ್ಲಿ ಸಿದ್ದರಾಮಯ್ಯ ಮಾತಾಡಿರುವ ರೀತಿಯನ್ನು ಅಣುಕಿಸಿದ ಯತ್ನಾಳ್, ವಿರೋಧ ಪಕ್ಷದ ನಾಯಕ ಈಗ ಹಣೆಗೆ ತಿಲಕ ಇಟ್ಟುಕೊಳ್ಳಲಾರಂಭಿಸಿದ್ದಾರೆ ಎಂದರು. ಮುಂದುವರಿದು ಮಾತಾಡಿದ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಒಂದು ಬಟನ್ ಒತ್ತಿದರೆ ಎಲ್ಲರ ಖಾತೆಗಳಿಗೆ ರೂ. 100 ಜಮೆಯಾಗುತ್ತದೆ ಎಂದರು. ಹೇಗೆ ಅಂತ ವಿವರಿಸಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.