Bengaluru: ಅಸ್ವಸ್ಥರಾಗಿದ್ದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಆರೋಗ್ಯ ಸ್ಥಿರ, ಇಂದು ಸಾಯಂಕಾಲ ಡಿಸ್ಚಾರ್ಜ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 20, 2023 | 10:26 AM

ಆಸ್ಪತ್ರೆಯ ವೈದ್ಯರೊಬ್ಬರು ನೀಡಿದ ಹೇಳಿಕೆಯ ಪ್ರಕಾರ ಯತ್ನಾಳ್ ಅವರ ಎಲ್ಲ ಪ್ರಮುಖ ಅಂಗಾಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ.

ಬೆಂಗಳೂರು: ಬುಧವಾರದಂದು ವಿಧಾನ ಸಭಾ ಅಧಿವೇಶನ ನಡೆಯುತ್ತಿದ್ದಾಗ ಉಂಟಾದ ಗಲಾಟೆ ಮತ್ತು ಮಾರ್ಷಲ್ ಗಳ ತಳ್ಳಾಟ ನೂಕಾಟದಲ್ಲಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದ ನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಅವರ ಆರೋಗ್ಯ ಸ್ಥಿರವಾಗಿದೆ. ಕಳೆದ ರಾತ್ರಿ ವಿಧಾನಸಭಾ ಸ್ಪೀಕರ್ ಯುಟಿ ಖಾದರ್ (UT Khader) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಆಸ್ಪತ್ರೆಗೆ ತೆರಳಿ ಶಾಸಕನ ಆರೋಗ್ಯ ವಿಚಾರಿಸಿದರು. ಯತ್ನಾಳ್ ಹಾಸಿಗೆಯಲ್ಲಿ ಕೂತು ಮುಖ್ಯಮಂತ್ರಿಯವರ ಜೊತೆ ಮಾತಾಡಿದರು. ನಿನ್ನೆ ಸಂಜೆ ಆಸ್ಪತ್ರೆಯ ವೈದ್ಯರೊಬ್ಬರು ನೀಡಿದ ಹೇಳಿಕೆಯ ಪ್ರಕಾರ ಯತ್ನಾಳ್ ಅವರ ಎಲ್ಲ ಪ್ರಮುಖ ಅಂಗಾಂಗಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ, ರಕ್ತದೊತ್ತಡ ಹೆಚ್ಚಾದ ಕಾರಣ ಆಸ್ಪತ್ರೆಗೆ ದಾಖಲಾದಾಗ ಬೆವರಿತ್ತಿದ್ದರು, ಗುರುವಾರ ಸಾಯಂಕಾಲ ಅವರನ್ನು ಬಿಡುಗಡೆ ಮಾಡಲಾಗುವುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.