ಸ್ಪೀಕರ್‌ ತಮ್ಮ ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್

Updated on: Mar 13, 2025 | 4:59 PM

ಕಾಡಿನಲ್ಲಿ ಪ್ರಾಣಿಗಳನ್ನು ಕಾಯುವ ಜನರಿಗೆ ಎಸ್ಸಿ, ಎಸ್ಟಿ ಹಣ ಬಳಸಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಆಗ ಪ್ರತಿಕ್ರಿಯಿಸಿದ ಸ್ಫೀಕರ್ ಯುಟಿ ಖಾದರ್, ಅಲ್ಲಿ SC-ST ಸಮುದಾಯದವರಿದ್ದಾರೆ. ಅವರಿಗೆ ಕೊಟ್ಟಿದ್ದಾರೆಂದರು. ಬಳಿಕ ಮಧ್ಯ ಪ್ರವೇಶಿಸಿದ ಬಸನಗೌಡ ಪಾಟೀಲ್ ಯತ್ನಾಳ್, ಕಾಡಿನಲ್ಲಿ ಏನು ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳು ಇವೆಯಾ? ಎಂದು ಹುಲಿ ದಾಳಿ ಮಾಡುವ ರೀತಿ ಅನುಕರಣೆ ಮಾಡಿ ಸ್ಪೀಕರ್ ಕಾಲೆಳೆದರು.

ಬೆಂಗಳೂರು, (ಮಾರ್ಚ್​ 13): ಬಜೆಟ್​ ಮೇಲಿನ ಚರ್ಚೆ ವೇಳೆ ಹುಲಿ ಬಗ್ಗೆ ಸ್ಪೀಕರ್​ ಮತ್ತು ಯತ್ನಾಳ್​ ನಡುವೆ ಸ್ವಾರಸ್ಯಕರ ಚರ್ಚೆ ಆಯ್ತು. ವಿಧಾನಸಭೆಯಲ್ಲಿ ಬಜೆಟ್‌ ಮೇಲಿನ ಚರ್ಚೆ ವೇಳೆ ಎಸ್ಸಿ, ಎಸ್ಟಿ ಹಣ ಬೇರೆಯದ್ದಕ್ಕೆ ಬಳಕೆ ಮಾಡಿರುವ ಸಂಬಂಧ ವಿಕ್ಷದ ನಾಯಕರು ಪ್ರಸ್ತಾಪಿದರು. ಕಾಡಿನಲ್ಲಿ ಪ್ರಾಣಿಗಳನ್ನು ಕಾಯುವ ಜನರಿಗೆ ಎಸ್ಸಿ, ಎಸ್ಟಿ ಹಣ ಬಳಸಿದ್ದಾರೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದರು. ಆಗ ಪ್ರತಿಕ್ರಿಯಿಸಿದ ಸ್ಫೀಕರ್ ಯುಟಿ ಖಾದರ್, ಅಲ್ಲಿ SC-ST ಸಮುದಾಯದವರಿದ್ದಾರೆ. ಅವರಿಗೆ ಕೊಟ್ಟಿದ್ದಾರೆಂದರು. ಬಳಿಕ ಮಧ್ಯ ಪ್ರವೇಶಿಸಿದ ಬಸನಗೌಡ ಪಾಟೀಲ್ ಯತ್ನಾಳ್, ಕಾಡಿನಲ್ಲಿ ಏನು ಲಿಂಗಾಯತ, ದಲಿತ, ಬ್ರಾಹ್ಮಣ ಹುಲಿಗಳು ಇವೆಯಾ? ಎಂದು ಹುಲಿ ದಾಳಿ ಮಾಡುವ ರೀತಿ ಅನುಕರಣೆ ಮಾಡಿ ಸ್ಪೀಕರ್ ಕಾಲೆಳೆದರು. ಈ ವೇಳೆ ಇಡೀ ಸದನ ನಗೆ ಗಡಲಲ್ಲಿ ತೇಲಿತು.

ಯತ್ನಾಳ್​ ಮಾತಿನಿಂದ ಸ್ಪೀಕರ್‌ ತಮ್ಮ ಮಾತನ್ನು ವಾಪಸ್ ಪಡೆಯುತ್ತೇನೆ ಎಂದರು. ಆದರೂ ಬಿಡದ ಯತ್ನಾಳ್, ತಮ್ಮ ಮಾತನ್ನು ಮುಂದುವರಿಸಿದರು. ಕೊನೆಗೆ ಶಾಸಕ ಯತ್ನಾಳ್ ಮಾತಿಗೆ ಸ್ಪೀಕರ್ ಯು.ಟಿ.ಖಾದರ್‌ ಕೈಮುಗಿದು ಸಾಕು ಎಂದರು.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More