ಗುತ್ತಿಗೆದಾರರ ಆರೋಪಗಳನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿ ಸಿದ್ದರಾಮಯ್ಯ ಸರ್ಕಾರ ತನ್ನ ಸಾಚಾತನ ನಿರೂಪಿಸಲಿ: ಡಾ ಸಿಎನ್ ಅಶ್ವಥ್ ನಾರಾಯಣ
ಗುತ್ತಿಗೆದಾರರು ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತಾಡಿದ ಅವರು, ಗುತ್ತಿಗೆದಾರರು (contractors) ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ (commission) ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರ ಗುತ್ತಿಗೆದಾರರ ಆರೋಪಗಳನ್ನು ತನಿಖೆ ಮಾಡಿಸಲು, ಲೋಕಾಯುಕ್ತಕ್ಕೆ ನೀಡಿ ತಾನೆಷ್ಟು ಸಾಚಾ ಅಂತ ತೋರಿಸಲಿ ಅಂದು ಆಶ್ವಥ್ ನಾರಾಯಣ ಸವಾಲೆಸೆದರು. ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರಲಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ, ಕಾಂಗ್ರೆಸ್ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿರುವ ಮತ್ತು ಮುಳುಗುವ ಹಂತದಲ್ಲಿರುವ ಪಕ್ಷ, ಅದನ್ನು ಸೇರಲು ಯಾರು ತಾನೆ ಇಚ್ಛಿಸುತ್ತಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
