ಗುತ್ತಿಗೆದಾರರ ಆರೋಪಗಳನ್ನು ಲೋಕಾಯುಕ್ತ ತನಿಖೆಗೆ ಒಪ್ಪಿಸಿ ಸಿದ್ದರಾಮಯ್ಯ ಸರ್ಕಾರ ತನ್ನ ಸಾಚಾತನ ನಿರೂಪಿಸಲಿ: ಡಾ ಸಿಎನ್ ಅಶ್ವಥ್ ನಾರಾಯಣ
ಗುತ್ತಿಗೆದಾರರು ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ ಎಂದು ಅಶ್ವಥ್ ನಾರಾಯಣ ಹೇಳಿದರು.
ಬೆಂಗಳೂರು: ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ. ಬೆಂಗಳೂರಲ್ಲಿ ಸುದ್ದಿಗಾರರೊಂದಿಗೆ ಇಂದು ಮಾತಾಡಿದ ಅವರು, ಗುತ್ತಿಗೆದಾರರು (contractors) ಮಾಡುತ್ತಿರುವ ಆಪಾದನೆಗಳನ್ನು ಮುಚ್ಚಿಹಾಕುತ್ತಿರುವ ಪ್ರಯತ್ನ ಸರ್ಕಾರ ಮಾಡುತ್ತಿದೆ, ಬಿಲ್ ಬಿಡುಗಡೆ ಮಾಡಲು ದೊಡ್ಡ ಮೊತ್ತದ ಕಮೀಶನ್ (commission) ಕೇಳಲಾಗುತ್ತಿದೆ ಎಂದು ಆರೋಪಿಸಿರುವ ಗುತ್ತಿಗೆದಾರರು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ಭ್ರಷ್ಟಾಚಾರರಹಿತ ಆಡಳಿತ ಎಂದು ಹೇಳಿಕೊಳ್ಳುತ್ತಿರುವ ಸಿದ್ದರಾಮಯ್ಯ ಸರ್ಕಾರ ಗುತ್ತಿಗೆದಾರರ ಆರೋಪಗಳನ್ನು ತನಿಖೆ ಮಾಡಿಸಲು, ಲೋಕಾಯುಕ್ತಕ್ಕೆ ನೀಡಿ ತಾನೆಷ್ಟು ಸಾಚಾ ಅಂತ ತೋರಿಸಲಿ ಅಂದು ಆಶ್ವಥ್ ನಾರಾಯಣ ಸವಾಲೆಸೆದರು. ಬಿಜೆಪಿಯ ಕೆಲ ಶಾಸಕರು ಕಾಂಗ್ರೆಸ್ ಸೇರಲಿರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ, ಕಾಂಗ್ರೆಸ್ ಒಂದು ಕುಟುಂಬಕ್ಕೆ ಮಾತ್ರ ಸೀಮಿತವಾಗಿರುವ ಮತ್ತು ಮುಳುಗುವ ಹಂತದಲ್ಲಿರುವ ಪಕ್ಷ, ಅದನ್ನು ಸೇರಲು ಯಾರು ತಾನೆ ಇಚ್ಛಿಸುತ್ತಾರೆ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
New Year 2026 Live: ಬ್ರಿಗೇಡ್ ರಸ್ತೆಯಲ್ಲಿ ನ್ಯೂ ಇಯರ್ ಸಂಭ್ರಮಾಚರಣೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!

