ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮಾತುಗಳಲ್ಲಿ ಆತ್ಮವಿಶ್ವಾಸಕ್ಕಿಂತ ಹತಾಶೆ ಹೆಚ್ಚು ವ್ಯಕ್ತವಾಗುತ್ತಿದೆ!

ಬಿಜೆಪಿ ಶಾಸಕ ಡಾ ಸಿಎನ್ ಅಶ್ವಥ್ ನಾರಾಯಣ ಮಾತುಗಳಲ್ಲಿ ಆತ್ಮವಿಶ್ವಾಸಕ್ಕಿಂತ ಹತಾಶೆ ಹೆಚ್ಚು ವ್ಯಕ್ತವಾಗುತ್ತಿದೆ!
|

Updated on: Aug 26, 2023 | 6:02 PM

ಕಾಂಗ್ರೆಸ್ ಪಕ್ಷದ ಶಾಸಕರಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅತೃಪ್ತಿ, ಅಸಮಾಧಾನ ಹೊಗೆಯಾಡುತ್ತಿದೆ, ಭ್ರಷ್ಟಾಚಾರ ನಡೆಯುತ್ತಿದೆ ಅಂತ ಶಾಸಕರ ಜೊತೆ ಗುತ್ತಿಗೆದಾರರು ಸಹ ದೂರುತ್ತಿದ್ದಾರೆ, ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲರುವವರು ಮುಳಗುವುದರ ಜೊತೆಗೆ ಅಲ್ಲಿಗೆ ಹೋಗುವವರು ಸಹ ಮುಳುಗುತ್ತಾರೆ ಎಂದು ಆಶ್ವಥ್ ನಾರಾಯಣ ಹೇಳಿದರು.

ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಡಾ ಸಿಎನ್ ಅಶ್ವಥ್ ನಾರಾಯಣ (Dr CN Ashwath Narayan) ಅವರ ಮಾತುಗಳಲ್ಲಿ ಹತಾಶೆ ಸ್ಪಷ್ಟವಾಗಿ ಕಾಣುತ್ತಿದೆ. ಇಂದು ತಮ್ಮ ಕ್ಷೇತ್ರದ ಮಲ್ಲೇಶ್ವರಂ ಕ್ರೀಡಾ ಪ್ರತಿಷ್ಠಾನದ ಬಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರಿಗೆ ಆಪರೇಶನ್ ಹಸ್ತ (Operation Hastha) ಬಗ್ಗೆ ಕೇಳಿದಾಗ, ಅದನ್ನು ಕಾಂಗ್ರೆಸ್ ನಾಯಕರು (Congress leaders) ನಡೆಸುತ್ತಿದ್ದಾರೋ ಇಲ್ಲವೋ ಗೊತ್ತಿಲ್ಲ, ಹೋಗುವ ಮತ್ತು ಬರುವ ನಾಯಕರನ್ನು ತಡೆಯೋದಿಕ್ಕಾಗಲ್ಲ ಎಂದರು. ಮುಂದುವರಿದು ಮಾತಾಡಿದ ಆವರು, ಕಾಂಗ್ರೆಸ್ ಪಕ್ಷವೇ ಒಂದು ಮುಳುಗುತ್ತಿರುವ ದೋಣಿಯಾಗಿದೆ. ಪಕ್ಷದ ಶಾಸಕರಲ್ಲಿ ತಮ್ಮದೇ ಸರ್ಕಾರದ ವಿರುದ್ಧ ಅತೃಪ್ತಿ, ಅಸಮಾಧಾನ ಹೊಗೆಯಾಡುತ್ತಿದೆ, ಭ್ರಷ್ಟಾಚಾರ ನಡೆಯುತ್ತಿದೆ ಅಂತ ಶಾಸಕರ ಜೊತೆ ಗುತ್ತಿಗೆದಾರರು ಸಹ ದೂರುತ್ತಿದ್ದಾರೆ, ಹಾಗಾಗಿ ಕಾಂಗ್ರೆಸ್ ಪಕ್ಷದಲ್ಲರುವವರು ಮುಳಗುವುದರ ಜೊತೆಗೆ ಅಲ್ಲಿಗೆ ಹೋಗುವವರು ಸಹ ಮುಳುಗುತ್ತಾರೆ ಎಂದು ಆಶ್ವಥ್ ನಾರಾಯಣ ಹೇಳಿದರು. ಕೊನೆಯಲ್ಲಿ ಅವರು ಬಿಜೆಪಿಯಲ್ಲಿರುವ ಯಾವುದೇ ಕಾಂಗ್ರೆಸ್ ಪಕ್ಷ ಸೇರುವುದಿಲ್ಲ ಅಂತ ಹೇಳುತ್ತಾ ಹುಸಿ ಆತ್ಮವಿಶ್ವಾಸ ವ್ಯಕ್ತಪಡಿಸುವ ಪ್ರಯತ್ನ ಮಾಡುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಪ್ರಧಾನಿ ಮೋದಿಯವರಿಗೋಸ್ಕರ ಎಲ್ಲವನ್ನು ಸಹಿಸಿಕೊಂಡಿದ್ದೇವೆ: ಕುಮಾರಸ್ವಾಮಿ
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ಕುಮಾರಸ್ವಾಮಿ ವಿರುದ್ಧ ಯೋಗೇಶ್ವರ್ ಮಾಡಿದ ಆರೋಪ ಸರಿಯಲ್ಲ: ನಿಖಿಲ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ವಿಡಿಯೋ: ರಾಮ-ಆಂಜನೇಯನ ಮೂರ್ತಿ ಉದ್ಘಾಟಿಸಿದ ಶಿವರಾಜ್ ಕುಮಾರ್
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಕಾಂಗ್ರೆಸ್​ನಿಂದ ಸ್ಪರ್ಧಿಸಿ ಗೆದ್ದರೆ ಮಂತ್ರಿಯಾಗಬಹುದೇ ಯೋಗೇಶ್ವರ್?
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ