Non Veg Food Row: ಮಾಂಸಾಹಾರ ಸೇವಿಸಿ ದೇವಸ್ಥಾನಕ್ಕೆ ಹೋಗಿದ್ದನ್ನು ಅಂಗೀಕರಿಸಿದ ಬಿಜೆಪಿ ಶಾಸಕ ಸಿಟಿ ರವಿ

ಅರುಣ್​ ಕುಮಾರ್​ ಬೆಳ್ಳಿ

Updated on: Feb 22, 2023 | 4:19 PM

ರವಿಯವರು ಕೇವಲ ಆರ್ಧಗಂಟೆ ಮೊದಲು ಇದೇ ಮಂಡ್ಯದಲ್ಲಿ ಮತ್ತು ಇದೇ ಮಾಧ್ಯಮ ಪ್ರತಿನಿಧಿಗಳ ಮುಂದೆ ತಾನು ದೇವಸ್ಥಾನಕ್ಕೆ ಹೋಗೇ ಇಲ್ಲ ಎಂದಿದ್ದರು.

ಮಂಡ್ಯ: ಬಿಜೆಪಿಯ ಸಿಟಿ ರವಿ (CT Ravi) ಕಾರವಾರದ ಭಟ್ಕಳದಲ್ಲಿ ಮಾಂಸದೂಟ ಸೇವಿಸಿ ಅಲ್ಲಿನ ನಾಗಬನ ದೇವಸ್ಥಾನಕ್ಕೆ ಹೋದ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಚಿಕ್ಕಮಗಳೂರು ಶಾಸಕ ತಮ್ಮ ವರಸೆ ಬದಲಾಯಿಸಿದ್ದಾರೆ. ಮಂಡ್ಯದಲ್ಲಿ ಪತ್ರಿಕಾ ಪ್ರತಿನಿಧಿಗಳು ರವಯವರಿಗೆ ಪದೇಪದೆ ಅದೇ ಪ್ರಶ್ನೆ ಕೇಳಿದಾಗ ಇನ್ನು ಉಳಿಗಾಲವಿಲ್ಲ ಅಂತ ಭಾವಿಸಿದ ರವಿ ಹೌದು, ನಾನು ಮಾಂಸಾಹಾರ (meat) ಸೇವಿಸಿದ್ದು ನಿಜ, ಆದರೆ ದೇವಸ್ಥಾನದೊಳಗೆ (temple) ಮಾತ್ರ ಹೋಗಿಲ್ಲ. ದೇವಸ್ಥಾನದ ಬಾಗಿಲು ಹಾಕಿದ್ದರಿಂದ ಹೊರಗಿನಿಂದಲೇ ದೇವರಿಗೆ ನಮಸ್ಕಾರ ಮಾಡಿ ಹಿಂತಿರುಗಿದ್ದಾಗಿ ಹೇಳಿದರು. ರವಿಯವರು ಕೇವಲ ಆರ್ಧಗಂಟೆ ಮೊದಲು ಇದೇ ಮಂಡ್ಯದಲ್ಲಿ ಮತ್ತು ಇದೇ ಮಾಧ್ಯಮ ಪ್ರತಿನಿಧಿಗಳ ಮುಂದೆ ತಾನು ದೇವಸ್ಥಾನಕ್ಕೆ ಹೋಗೇ ಇಲ್ಲ ಎಂದಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.