ಹರ್ಷನ ಕೊಲೆ ವಿರುದ್ಧ ಹಿಂದೂ-ಪರ ಸಂಘಟನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆಗಿಳಿದ ಬಿಜೆಪಿ ಶಾಸಕನಿಗೆ ಮುಖಭಂಗ

ನಾಗೇಂದ್ರ ಮಾತಾಡಲು ಮೈಕನ್ನು ಕೈಗೆತ್ತಿಕೊಳ್ಳುತ್ತಿದ್ದಂತೆಯೇ ಪ್ರದರ್ಶನಕಾರರು ರಾಜ್ಯದ ಆಡಳಿತರೂಢ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು.

ಹರ್ಷನ ಕೊಲೆ ವಿರುದ್ಧ ಹಿಂದೂ-ಪರ ಸಂಘಟನೆ ಕಾರ್ಯಕರ್ತರೊಂದಿಗೆ ಪ್ರತಿಭಟನೆಗಿಳಿದ ಬಿಜೆಪಿ ಶಾಸಕನಿಗೆ ಮುಖಭಂಗ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2022 | 6:34 PM

ಬಜರಂಗದಳದ ಕಾರ್ಯಕರ್ತ ಹರ್ಷ (Harsha) ಅವರ ಕೊಲೆ ವೈಯಕ್ತಿಕ ವೈಷಮ್ಯದ ಹಿನ್ನಲೆಯಲ್ಲಿ ನಡೆದಿದೆ ಎಂದು ಖುದ್ದು ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮತ್ತು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆಸಿ ನಾರಾಯಣಗೌಡ ಹೇಳಿದರೂ ಕೊಲೆಯ ವಿರುದ್ಧ ಪ್ರತಿಭಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ. ಬುಧವಾರದಂದು ಮೈಸೂರಿನಲ್ಲಿ ಬಜರಂಗದಳದ ಕಾರ್ಯಕರ್ತರು ಸೇರಿದಂತೆ ಹಲವಾರು ಹಿಂದೂ-ಪರ ಸಂಘಟನೆಗಳು ಪ್ರದರ್ಶನ ನಡೆಸಿದವು. ಪ್ರತಿಭಟನೆಯ ನೇತೃತ್ವ ವಹಿಸಿದವರಲ್ಲಿ ಮೈಸೂರಿನ ಬಿಜೆಪಿ ಶಾಸಕ ಎಲ್ ನಾಗೇಂದ್ರ (L Nagendra) ಕೂಡ ಒಬ್ಬರು. ಪ್ರತಿಭಟನೆಯಲ್ಲಿ ನೂರಾರು ಕಾರ್ಯಕರ್ತರು ಜಮಾಯಿಸಿದ್ದರು. ಹರ್ಷನ ಸಾವಿಗೆ ನ್ಯಾಯ ಬೇಕು ಅಂತ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಿದ್ದರು. ಇದೇ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತಾಡಲು ಮುಂದಾದ ಶಾಸಕ ನಾಗೇಂದ್ರ ಅವರಿಗೆ ತೀವ್ರ ಮುಖಭಂಗವಾಯಿತು.

ನಾಗೇಂದ್ರ ಮಾತಾಡಲು ಮೈಕನ್ನು ಕೈಗೆತ್ತಿಕೊಳ್ಳುತ್ತಿದ್ದಂತೆಯೇ ಪ್ರದರ್ಶನಕಾರರು ರಾಜ್ಯದ ಆಡಳಿತರೂಢ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಲಾರಂಭಿಸಿದರು. ಬರೀ ಘೋಷಣೆ ಕೂಗಿದ್ದರೆ ಶಾಸಕರಿಗೆ ಪ್ರಾಯಶಃ ಮುಜುಗುರ ಉಂಟಾಗುತ್ತಿರಲಿಲ್ಲ. ಆದರೆ ಕೆಲ ಘೋಷಣೆಗಳು ಅವಾಚ್ಯ ಪದಗಳಿಂದ ಕೂಡಿದ್ದವು. ಹಾಗಾಗೇ, ಆ ಪದಗಳನ್ನು ನಾವು ವಿಡಿಯೋನಲ್ಲಿ ಬೀಪ್ ಮಾಡಿದ್ದೇವೆ.

ನೇತೃತ್ವ ವಹಿಸಿದ ಹಿಂದೂ ಪರ ಸಂಘಟನೆಗಳ ನಾಯಕರು ಶಾಂತರಾಗುವಂತೆ ಮನವಿ ಮಾಡಿದರೂ ಪ್ರದರ್ಶನಕಾರರ ಆರ್ಭಟ ನಿಲ್ಲಲಿಲ್ಲ. ಮುಂದಿನ ಸಾಲಿನಲ್ಲಿದ್ದ ಮಹಿಳಾ ಕಾರ್ಯರ್ತೆಯೊಬ್ಬರು ಪ್ರತಿಭಟನಾಕಾರರಿಗೆ ಗದರಿದರೂ ಅವರು ಸುಮ್ಮನಾಗಲಿಲ್ಲ.

ತಮ್ಮ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೇಳಿಸಿಕೊಳ್ಳುತ್ತಿದ್ದ ಶಾಸಕ ನಾಗೇಂದ್ರ ಪ್ಯಾದೆಯಂತೆ ಮುಗುಳ್ನಗುವುದನ್ನು ಬಿಟ್ಟು ಬೇರೇನೂ ಮಾಡುವಂತಿರಲಿಲ್ಲ!

ಇದನ್ನೂ ಓದಿ:   ಶಿವಮೊಗ್ಗದಲ್ಲಿ ಹರ್ಷ ಕೊಲೆ ನಂತರ ಪರಿಸ್ಥಿತಿ ವಿಕೋಪಕ್ಕೆ; ಶಾಂತಿ ಕಾಪಾಡುವಂತೆ ಹರ್ಷನ ಸಹೋದರಿ ಅಶ್ವಿನಿ ಮನವಿ

Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್