ಹರ್ಷ ಹುತಾತ್ಮನಾಗಿದ್ದಾನೆ, ಕೊಲೆ ಮಾಡಿದವರನ್ನು ಗುಂಡಿಟ್ಟು ಕೊಲ್ಲಬೇಕು ಎಂದರು ಬಿಜೆಪಿ ಶಾಸಕ ಹರತಾಳು ಹಾಲಪ್ಪ

ಗುಂಡಿಟ್ಟು ಕೊಲ್ಲಬೇಕೆಂದು ಹಾಲಪ್ಪ 4-5 ಸಲ ಹೇಳುತ್ತಾರೆ. ಅವರನ್ನು ಕೊಲ್ಲದಿದ್ದರೆ ಹರ್ಷನ ಸಾವಿಗೆ ನ್ಯಾಯ ಸಿಗುವುದಿಲ್ಲ, ಅವನನ್ನು ಕೊಂದವರು ಬೆಲೆ ತೆರಲೇಬೇಕು. ತಪ್ಪಿತಸ್ಥರನ್ನು ಮುಗಿಸದೆ ಹೋದರೆ ಇಂಥ ಕೃತ್ಯಗಳು ನಿಯಂತ್ರಣಕ್ಕೆ ಬರೋದಿಲ್ಲ ಅಂತ ಅವರು ಹೇಳುತ್ತಾರೆ.

ಹರ್ಷ ಹುತಾತ್ಮನಾಗಿದ್ದಾನೆ, ಕೊಲೆ ಮಾಡಿದವರನ್ನು ಗುಂಡಿಟ್ಟು ಕೊಲ್ಲಬೇಕು ಎಂದರು ಬಿಜೆಪಿ ಶಾಸಕ ಹರತಾಳು ಹಾಲಪ್ಪ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 24, 2022 | 9:36 PM

ಬಜರಂಗದಳದ (Bajrang Dal) ಕಾರ್ಯಕರ್ತ ಹರ್ಷನ ಕೊಲೆ ನಡೆದು 5 ದಿನ ಕಳೆದಿವೆ. ರಾಜ್ಯದೆಲ್ಲೆಡೆ ಈಗಲೂ ಪ್ರಕ್ಷುಬ್ಧ ಸ್ಥಿತಿ ಇದೆ. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರು ತಮ್ಮ ತಮ್ಮ ಶಾಸಕರಿಗೆ ಹರ್ಷನ ಕೊಲೆ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಬಾರದೆಂದು ನಿರ್ದೇಶಿಸುವ ಕೆಲಸವನ್ನು ಮೊದಲು ಮಾಡಬೇಕಿದೆ. ಯಾಕೆ ಅಂತ ನಿಮಗೆ ಗೊತ್ತಿದೆ. ಇವರೆಲ್ಲ ತಮ್ಮ ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿದ್ದಾರೆ. ತಾವೇ ಕೋರ್ಟು ಅನ್ನುವ ರೀತಿಯಲ್ಲಿ ಮಾತಾಡುತ್ತಿದ್ದಾರೆ. ಬಿಜೆಪಿ ಶಾಸಕ ಹರತಾಳು ಹಾಲಪ್ಪ ಅವರು ಹರ್ಷ ಹುತಾತ್ಮನಾಗಿದ್ದಾನೆ, ಅವನ ಸಾವು ವ್ಯರ್ಥ ಹೋಗಬಾರದು, ತಪ್ಪಿತಸ್ಥರನ್ನು ಪೊಲೀಸರು ಗುಂಡಿಟ್ಟು ಕೊಲ್ಲಬೇಕು ಅಂತ ಹೇಳುತ್ತಾರೆ.

ಅವರನ್ನು ಗುಂಡಿಟ್ಟು ಕೊಲ್ಲದಿದ್ದರೆ ಎಲ್ಲ ಅನರ್ಥ ಆಗುತ್ತದೆ. ಕೊಲೆಗಡುಕರನ್ನು ಬಂಧಿಸಿ ಜೈಲಿಗೆ ಹಾಕುತ್ತಾರೆ, ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತದೆ, ಸೂಕ್ತ ಸಾಕ್ಷ್ಯಾಧಾರ ಇಲ್ಲ ಅಂತ ಅವರಿಗೆ ಜಾಮೀನು ಸಿಗುತ್ತದೆ. ಹಾಗಾಗಲು ಬಿಡಬಾರದು. ಅವರನ್ನು ಗುಂಡಿಟ್ಟು ಕೊಲ್ಲುವುದೊಂದೇ ಸರಿಯಾದ ಮಾರ್ಗ ಅಂತ ಹಾಲಪ್ಪ ಹೇಳಿದರು.

ಗುಂಡಿಟ್ಟು ಕೊಲ್ಲಬೇಕೆಂದು ಹಾಲಪ್ಪ 4-5 ಸಲ ಹೇಳುತ್ತಾರೆ. ಅವರನ್ನು ಕೊಲ್ಲದಿದ್ದರೆ ಹರ್ಷನ ಸಾವಿಗೆ ನ್ಯಾಯ ಸಿಗುವುದಿಲ್ಲ, ಅವನನ್ನು ಕೊಂದವರು ಬೆಲೆ ತೆರಲೇಬೇಕು. ತಪ್ಪಿತಸ್ಥರನ್ನು ಮುಗಿಸದೆ ಹೋದರೆ ಇಂಥ ಕೃತ್ಯಗಳು ನಿಯಂತ್ರಣಕ್ಕೆ ಬರೋದಿಲ್ಲ ಅಂತ ಅವರು ಹೇಳುತ್ತಾರೆ.

ಅದಕ್ಕೆ ನಾವು ಹೇಳಿದ್ದು, ಶಾಸಕರು ಮತ್ತು ಪಕ್ಷಗಳ ಇತರ ಸಣ್ಣಪುಟ್ಟ ನಾಯಕರು ಕೋರ್ಟ್​ಗಳಾಗುವುದು ಬೇಡ. ವರಿಷ್ಠರು ಅವರನ್ನು ತಡೆಯಲೇ ಬೇಕಾಗಿದೆ

ಇದನ್ನೂ ಓದಿ:  ಹರ್ಷ ಹತ್ಯೆ ಆರೋಪಿಗಳನ್ನು ಹೇಗೆ ಸಾಕಿದ್ದಾರೆ ಇಷ್ಟು ವರ್ಷ? ಸಂಬಂಧಪಟ್ಟ ಪೊಲೀಸರ ವಿರುದ್ಧವೂ ಕ್ರಮಕೈಗೊಳ್ತೇವೆ ಎಂದ ಆರಗ ಜ್ಞಾನೇಂದ್ರ

Follow us
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ