ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆ ನಿಯಮಿತದ (KSDL) ಅಧ್ಯಕ್ಷರಾಗಿದ್ದ ಚನ್ನಗಿರಿಯ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಮವರು (Madal Virupakshappa) ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅದೇ ಸಂಸ್ಥೆಯ ಸಾಬೂನುನಿಂದ ಕೈತೊಲೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಶುದ್ಧ ಕನ್ನಡವಲ್ಲದ, ತಪ್ಪು ಕಾಗುಣಿತಗಳ ರಾಜೀನಾಮೆ ಪತ್ರವನ್ನು ಮಾಡಾಳ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಲ್ಲಿಸಿದ್ದಾರೆ. ಪತ್ರದಲ್ಲಿ ಮಾಡಾಳ್ ಸೀನಿಯರ್ ತನಗೂ ಪ್ರಕರಣಕ್ಕೂ ಸಂಬಂಧವಿಲ್ಲ ಅಂತ ಹೇಳಿರುವುದು ಆಶ್ಚರ್ಯ ಹುಟ್ಟಿಸುತ್ತದೆ. ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸುತ್ತಿದ್ದೇನೆ ಅಂತಲೂ ಮಹಾನುಭಾವರು ಹೇಳಿದ್ದಾರೆ! ನಿಮ್ಮ ಮಗನ ಮನೆಯಿಂದಲೇ ಕೋಟಿಗಟ್ಟಲೆ ಹಣ ಬರಾಮತ್ತಾಗಿರೋದು ವಿರೂಪಾಕ್ಷಪ್ಪನವರೇ!!
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ