MLA’s gimmick: ಮಾಧ್ಯಮ ಪ್ರತಿನಿಧಿಗಳಿಗೆ ಧಮ್ಕಿ ಹಾಕಿ ನಂತರ ಕೈಮುಗಿದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 09, 2023 | 4:58 PM

ತಮ್ಮ ವಕೀಲರನ್ನು ಭೇಟಿಯಾಗಿ ಹೊರಬಂದ ಶಾಸಕರನ್ನು ಮಾಧ್ಯಮ ಪ್ರತಿನಿಧಿಗಳು ಸುತ್ತುವರಿದಾಗ, ಯಾರೂ ನನ್ನನ್ನು ಮುಟ್ಟುವ ಪ್ರಯತ್ನ ಮಾಡಬೇಡಿ, ನಾನು ಇನ್ನೂ ಶಾಸಕ ಅನ್ನೋದನ್ನು ಮರೀಬೇಡಿ ಅಂತ ಹೆದರಿಸಲು ಪ್ರಯತ್ನಿಸುತ್ತಾರೆ.

ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪನವರ (Madal Virupakshappa) ವರಸೆ ನಿಮಿಷಕ್ಕೊಮ್ಮೆ ಬದಲಾಗುತ್ತಿದೆ. ಅದನ್ನು ಈ ವಿಡಿಯೋದಲ್ಲಿ ನೋಡಬಹುದು. ತಮ್ಮ ಮಗ ಹಾಗೂ ಖುದ್ದು ಅವರ ಮನೆಯಲ್ಲಿ ಸಿಕ್ಕ ಕೋಟ್ಯಾಂತರ ರೂಪಾಯಿ ಹಣದ ಬಗ್ಗೆ ವಿಚಾರಣೆ ಎದುರಿಸಲು ಇಂದು ಲೋಕಾಯುಕ್ತರ (Lokayukta) ಎದುರು ಹಾಜರಾಗುವ ಮೊದಲು ವಕೀಲರನ್ನು (lawyer) ಭೇಟಿಯಾಗಿ ಹೊರಬಂದ ಶಾಸಕರನ್ನು ಮಾಧ್ಯಮ ಪ್ರತಿನಿಧಿಗಳು ಸುತ್ತುವರಿದಾಗ, ಯಾರೂ ನನ್ನನ್ನು ಮುಟ್ಟುವ ಪ್ರಯತ್ನ ಮಾಡಬೇಡಿ, ನಾನು ಇನ್ನೂ ಶಾಸಕ ಅನ್ನೋದನ್ನು ಮರೀಬೇಡಿ ಅಂತ ಹೆದರಿಸಲು ಪ್ರಯತ್ನಿಸುತ್ತಾರೆ. ನಂತರ ಎರಡೂ ಕೈಗಳನ್ನು ಮುಗಿದು ದಯವಿಟ್ಟು ಸದ್ಯಕ್ಕೆ ನನ್ನನ್ನು ಏನೂ ಕೇಳಬೇಡಿ, ಲೋಕಾಯಕ್ತರ ವಿಚಾರಣೆ ಮುಗಿದ ಬಳಿಕ ಮಾತಾಡುತ್ತೇನೆ ಅನ್ನುತ್ತಾರೆ. ಅವರು ಮಾನಸಿಕ ಒತ್ತಡದಲ್ಲಿರುವುದು ಸತ್ಯ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 09, 2023 04:58 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.