ಮಕ್ಕಳು ಕಾಲೇಜಿಗೆ ಹೋಗಲು ಏನು ಧರಿಸಬೇಕು ಏನು ಧರಿಸಬಾರದು ಅಂತ ಹೇಳಲು ರಘುಪತಿ ಭಟ್ ಯಾರು? ಸಿದ್ದರಾಮಯ್ಯ

ಹಿಜಾಬ್ ಮತ್ತು ಕೇಸರಿ ವಸ್ತ್ರದ ನಡುವೆ ತಳುಕು ಹಾಕುವ ಪ್ರಮೇಯವೇ ಉದ್ಭವಿಸುವುದಿಲ್ಲ. ಹಿಂದೂ ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಕೇಸರಿ ಶಾಲು ಹೊದ್ದು ಬರಲು ಆರಂಭಿಸಿದ್ದಾರೆ. ಆದರೆ ಮುಸ್ಲಿಂ ಸಮುದಾಯದ ಮಕ್ಕಳು ಶತಮಾನಗಳಿಂದ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮಕ್ಕಳು ಕಾಲೇಜಿಗೆ ಹೋಗಲು ಏನು ಧರಿಸಬೇಕು ಏನು ಧರಿಸಬಾರದು ಅಂತ ಹೇಳಲು ರಘುಪತಿ ಭಟ್ ಯಾರು? ಸಿದ್ದರಾಮಯ್ಯ
| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Feb 04, 2022 | 7:09 PM

ಉಡುಪಿಯ ಹಿಜಾಬ್ (Hijab) ಪ್ರಕರಣ ಅಂತರರಾಷ್ಟ್ರೀಯ ಸುದ್ದಿಯಾಗುವುದರಲ್ಲಿ ಯಾವುದೇ ಸಂದೇಹ ಉಳಿದಿಲ್ಲ ಮಾರಾಯ್ರೇ. ವಿವಾದ ಉಂಟಾಗಿರುವ ಕಾಲೇಜಿನ ಪ್ರಿನ್ಸಿಪಾಲ್ ಸ್ಥಳೀಯ ಬಿಜೆಪಿ ಶಾಸಕ ಕೆ ರಘುಪತಿ ಭಟ್ (K Raghupati Bhat) ಅಣತಿಯಂತೆ ವರ್ತಿಸುತ್ತಿದ್ದಾರೆ, ಅವರು ಹೊರಡಿಸುವ ಡಿಕ್ಟ್ಯಾಟ್ ಅನ್ನು ಅನೂಚಾನಾಗಿ ಪಾಲಿಸುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ (Leader of Opposition) ಸಿದ್ದರಾಮಯ್ಯ (Siddaramaiah) ಆರೋಪಿಸಿದ್ದಾರೆ. ಬೆಂಗಳೂರನಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತಾಡಿದ ಸಿದ್ದರಾಮಯ್ಯ, ಶಾಲೆಯ ಆಡಳಿತ ಮತ್ತು ಸಮವಸ್ತ್ರದ ವಿಷಯದಲ್ಲಿ ತಲೆಹಾಕಲು ರಘುಪತಿ ಭಟ್ ಯಾರು, ಸರ್ಕಾರದಿಂದ ಸಂಬಳ ಪಡೆಯುವ ಕಾಲೇಜಿನ ಪ್ರಿನ್ಸಿಪಾಲ, ಭಟ್ ಹೇಳುವುದನ್ನು ಯಾಕೆ ಕೇಳುತ್ತಿದ್ದಾನೆ ಎಂದು ಪ್ರಶ್ನಿಸಿದರು.

ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರುವ ಬಗ್ಗೆ ಆಕ್ಷೇಪಣೆ ವ್ಯಕ್ತಡಿಸಿದ ವಿರೋಧ ಪಕ್ಷದ ನಾಯಕರು, ಹಿಜಾಬ್ ಮತ್ತು ಕೇಸರಿ ವಸ್ತ್ರದ ನಡುವೆ ತಳುಕು ಹಾಕುವ ಪ್ರಮೇಯವೇ ಉದ್ಭವಿಸುವುದಿಲ್ಲ. ಹಿಂದೂ ವಿದ್ಯಾರ್ಥಿಗಳು ಉದ್ದೇಶಪೂರ್ವಕವಾಗಿ ಕೇಸರಿ ಶಾಲು ಹೊದ್ದು ಬರಲು ಆರಂಭಿಸಿದ್ದಾರೆ. ಆದರೆ ಮುಸ್ಲಿಂ ಸಮುದಾಯದ ಮಕ್ಕಳು ಶತಮಾನಗಳಿಂದ ಹಿಜಾಬ್ ಧರಿಸಿ ಶಾಲಾ-ಕಾಲೇಜುಗಳಿಗೆ ಬರುತ್ತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಪ್ರಕರಣದ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ರಾಜಕೀಯ ಹೇಳಿಕೆ ನೀಡಿದ್ದಾರೆ ಅಂತ ಹೇಳಿದ ಸಿದ್ದರಾಮಯ್ಯ ಈಗ ಪ್ರಕರಣ ಕೋರ್ಟಿನ ಮೆಟ್ಟಿಲೇರಿರುವುದರಿಂದ ನ್ಯಾಯಾಲಯ ಏನು ಹೇಳುತ್ತದೆ ಅನ್ನೋದನ್ನು ಕಾದು ನೋಡಬೇಕಿದೆ ಎಂದರು.

ವೈಯಕ್ತಿಕವಾಗಿ, ಒಬ್ಬ ವಕೀಲನಾಗಿ ಮತ್ತು ವಿರೋಧ ಪಕ್ಷದ ನಾಯಕನಾಗಿ ತಾನು ಹೇಳುವುದೇನೆಂದರೆ, ಮುಸ್ಲಿಂ ಸಮುದಾಯದ ಮಕ್ಕಳು ಕಾಲೇಜಿಗೆ ಬರುವಾಗ ಹಿಜಾಬ್ ಧರಿಸದಂತೆ ತಡೆಯುವುದು ಸಂವಿಧಾನಬಾಹಿರವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ಕರಾವಳಿಯಿಂದ ಬೆಳಗಾವಿ ಜಿಲ್ಲೆಗೆ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಪಿಯು ವಿದ್ಯಾರ್ಥಿಗಳು

Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ