AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಬಿಜೆಪಿ ನಾಯಕರಲ್ಲಿ ಹಿಂದೆ ವೈಮನಸ್ಸುಗಳಿದ್ದವು ಎನ್ನುವ ಶಶಿಕಲಾ ಜೊಲ್ಲೆ ಲೋಕಸಭಾ ಚುನಾವಣೆ ಸಾಮೂಹಿಕ ಹೋರಾಟ ನಡೆಸುತ್ತೇವೆ ಅನ್ನುತ್ತಾರೆ!

ಬೆಳಗಾವಿ ಬಿಜೆಪಿ ನಾಯಕರಲ್ಲಿ ಹಿಂದೆ ವೈಮನಸ್ಸುಗಳಿದ್ದವು ಎನ್ನುವ ಶಶಿಕಲಾ ಜೊಲ್ಲೆ ಲೋಕಸಭಾ ಚುನಾವಣೆ ಸಾಮೂಹಿಕ ಹೋರಾಟ ನಡೆಸುತ್ತೇವೆ ಅನ್ನುತ್ತಾರೆ!

ಅರುಣ್​ ಕುಮಾರ್​ ಬೆಳ್ಳಿ
|

Updated on:Nov 02, 2023 | 7:38 PM

ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲದೆ ಕಾರವಾರದ ಬಿಜೆಪಿ ಅಭ್ಯರ್ಥಿಯನ್ನು ಸಹ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜರುಗಿದ ಪ್ರಮಾದಗಳು ಪುನರಾವರ್ತನೆಗೊಳ್ಳಲಾರವು ಎಂದು ಹೇಳುವ ಶಶಿಕಲಾ ಜೊಲ್ಲೆ ರಮೇಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಾರೆ.    

ಬೆಳಗಾವಿ: ನಿಪ್ಪಾಣಿ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ (Shashikala Jolle) ಬೆಳಗಾವಿ ಬಿಜೆಪಿ ನಾಯಕರ ನಡುವೆ ಒಳಜಗಳಗಳಿರುವುದನ್ನು ಅಂಗೀಕರಿಸುತ್ತಾರೆ. ಇಂದು ಬೆಳಗಾವಿಯಲ್ಲಿ ಇತರ ಕೆಲ ಜಿಲ್ಲಾ ಬಿಜೆಪಿ ನಾಯಕರೊಡನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಹಿಂದೆ ತಮ್ಮಲ್ಲಿ ಭಿನ್ನಾಭಿಪ್ರಾಯಗಳಿದ್ದಿರಬಹುದು (differences) ಅದರೆ ಈಗ ಎಲ್ಲರೂ ಒಂದಾಗಿರುವುದಾಗಿ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಪಕ್ಷದ ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಸಾಮೂಹಿಕವಾಗಿ ಕೆಲಸ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲದೆ ಕಾರವಾರದ ಬಿಜೆಪಿ ಅಭ್ಯರ್ಥಿಯನ್ನು ಸಹ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜರುಗಿದ ಪ್ರಮಾದಗಳು ಪುನರಾವರ್ತನೆಗೊಳ್ಳಲಾರವು ಎಂದು ಹೇಳುವ ಶಶಿಕಲಾ ಜೊಲ್ಲೆ ರಮೇಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  

 

Published on: Nov 02, 2023 07:38 PM