ಬೆಳಗಾವಿ ಬಿಜೆಪಿ ನಾಯಕರಲ್ಲಿ ಹಿಂದೆ ವೈಮನಸ್ಸುಗಳಿದ್ದವು ಎನ್ನುವ ಶಶಿಕಲಾ ಜೊಲ್ಲೆ ಲೋಕಸಭಾ ಚುನಾವಣೆ ಸಾಮೂಹಿಕ ಹೋರಾಟ ನಡೆಸುತ್ತೇವೆ ಅನ್ನುತ್ತಾರೆ!
ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲದೆ ಕಾರವಾರದ ಬಿಜೆಪಿ ಅಭ್ಯರ್ಥಿಯನ್ನು ಸಹ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜರುಗಿದ ಪ್ರಮಾದಗಳು ಪುನರಾವರ್ತನೆಗೊಳ್ಳಲಾರವು ಎಂದು ಹೇಳುವ ಶಶಿಕಲಾ ಜೊಲ್ಲೆ ರಮೇಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಬೆಳಗಾವಿ: ನಿಪ್ಪಾಣಿ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆ (Shashikala Jolle) ಬೆಳಗಾವಿ ಬಿಜೆಪಿ ನಾಯಕರ ನಡುವೆ ಒಳಜಗಳಗಳಿರುವುದನ್ನು ಅಂಗೀಕರಿಸುತ್ತಾರೆ. ಇಂದು ಬೆಳಗಾವಿಯಲ್ಲಿ ಇತರ ಕೆಲ ಜಿಲ್ಲಾ ಬಿಜೆಪಿ ನಾಯಕರೊಡನೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಹಿಂದೆ ತಮ್ಮಲ್ಲಿ ಭಿನ್ನಾಭಿಪ್ರಾಯಗಳಿದ್ದಿರಬಹುದು (differences) ಅದರೆ ಈಗ ಎಲ್ಲರೂ ಒಂದಾಗಿರುವುದಾಗಿ ಹೇಳಿದರು. ಮುಂಬರುವ ಲೋಕಸಭಾ ಚುನಾವಣೆಯಲ್ಲಿ (Lok Sabha polls) ಪಕ್ಷದ ಹೈಕಮಾಂಡ್ ಯಾರಿಗೇ ಟಿಕೆಟ್ ನೀಡಿದರೂ ಸಾಮೂಹಿಕವಾಗಿ ಕೆಲಸ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸುವುದಾಗಿ ಜೊಲ್ಲೆ ಹೇಳಿದರು. ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಕ್ಷೇತ್ರಗಳಲ್ಲದೆ ಕಾರವಾರದ ಬಿಜೆಪಿ ಅಭ್ಯರ್ಥಿಯನ್ನು ಸಹ ಗೆಲ್ಲಿಸುತ್ತೇವೆ ಎಂದು ಅವರು ಹೇಳಿದರು. ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲಾ ಬಿಜೆಪಿ ಘಟಕದಿಂದ ಜರುಗಿದ ಪ್ರಮಾದಗಳು ಪುನರಾವರ್ತನೆಗೊಳ್ಳಲಾರವು ಎಂದು ಹೇಳುವ ಶಶಿಕಲಾ ಜೊಲ್ಲೆ ರಮೇಶ್ ಜಾರಕಿಹೊಳಿ ಅವರ ನಾಯಕತ್ವದಲ್ಲಿ ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Nov 02, 2023 07:38 PM
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
