AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಬೆಳಗ್ಗೆ ಡಿಸಿಎಂ ಮನೆಗೆ ಭೇಟಿ ನೀಡಿದ್ದು ಯಾಕೆ ಗೊತ್ತಾ?

ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಬೆಳಗ್ಗೆ ಡಿಸಿಎಂ ಮನೆಗೆ ಭೇಟಿ ನೀಡಿದ್ದು ಯಾಕೆ ಗೊತ್ತಾ?

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Aug 27, 2024 | 12:36 PM

Share

ಮದುವೆ, ನಿಶ್ಚಿತಾರ್ಥ ಮತ್ತು ಇತರ ಸಮಾರಂಭಗಳ ಆಹ್ವಾನ ಪತ್ರಿಕೆ ನೀಡಲು ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿಗಳ ಮನೆಗೆ ಹೋಗೋದು ಸಾಮಾನ್ಯ ಸಂಗತಿ. ಕೆಲ ತಿಂಗಳುಗಳ ಹಿಂದೆ ಹಿರಿಯ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಬಿ ಶ್ರೀರಾಮುಲು ಸಹ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಮನೆಗೆ ತೆರಳಿ ಮಗಳ ಮದುವೆ ಇನ್ವಿಟೇಶನ್ ನೀಡಿದ್ದರು.

ಬೆಂಗಳೂರು: ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಕ್ಕೆ ವಿರೋಧ ಪಕ್ಷದ ನಾಯಕರ ಪೈಕಿ ಯಾರಾದರೂ ಭೇಟಿ ನೀಡಿದರೆ ಅದು ಸುದ್ದಿಯಾಗುತ್ತದೆ. ಯಲಹಂಕ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಇಂದು ಬೆಳಗ್ಗೆ ಶಿವಕುಮಾರ್ ಮನೆಗೆ ಆಗಮಿಸಿದಾಗ ಸಹಜವಾಗೇ ಅಚ್ಚರಿ ಉಂಟಾಗಿತ್ತು. ವಿಶ್ವನಾಥ್ ತಮ್ಮ ರಾಜಕೀಯ ಬದುಕಿನ ಆರಂಭದಿಂದಲೂ ಬಿಜೆಪಿಯಲ್ಲಿ ಬೆಳೆದು ಬಂದವರು ಮತ್ತು ಜೇಡವನ್ನು ಜೇಡವೆಂದೇ ಕರೆಯುವ ಸ್ವಭಾವದವರು. ಒಮ್ಮೆ ವಿಧಾನಸಭಾ ಅಧಿವೇಶನ ನಡೆಯುತ್ತಿದ್ದಾಗ ವಿಶ್ವನಾಥ್, ವಿರೋಧ ಪಕ್ಷದ ನಾಯಕ ಆರ್ ಅಶೋಕ ಮಾತಿಗೂ ಬೆಲೆ ನೀಡದೆ ತಮ್ಮ ಮಾತನ್ನು ಸಾಧಿಸಿದ್ದರು. ಲೋಕಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಡಾ ಕೆ ಸುಧಾಕರ್ ಗೆ ಟಿಕೆಟ್ ನೀಡಿದ್ದನ್ನು ಬಲವಾಗಿ ವಿರೋಧಿಸಿದ್ದ ವಿಶ್ವನಾಥ್ ಕೊನೆ ಹಂತದವರೆಗೆ ಪ್ರಚಾರಕ್ಕೆ ಹೋಗಿರಲಿಲ್ಲ. ಇಂಥ ವಿಶ್ವನಾಥ್, ಶಿವಕುಮಾರ್ ಮನೆಗೆ ಬಂದಾಗ ಆಶ್ಚರ್ಯವಾಗದಿರುತ್ತದೆಯೇ? ಅಸಲಿಗೆ ಅವರು ತಮ್ಮ ಮಗಳ ನಿಶ್ಚಿತಾರ್ಥ ಕಾರ್ಯಕ್ರಮದ ಅಮಂತ್ರಣ ಪತ್ರಿಕೆ ನೀಡಲು ಆಗಮಿಸಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಅಮಿತ್ ಶಾ ಸಂಧಾನ ಸಫಲ, ಮುನಿಸು ಮರೆತು ಮರೆತು ಒಂದಾದ ಎಸ್ ಆರ್ ವಿಶ್ವನಾಥ್ ಮತ್ತು ಡಾ ಕೆ ಸುಧಾಕರ್

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.