ಬೆಂಗಳೂರಿಗೆ ಬಿಜೆಪಿ ಕೊಡುಗೆ ಏನು? ಡಿಕೆಶಿ ಪ್ರಶ್ನೆಗೆ ಉದಾಹರಣೆ ಸಮೇತ ಉತ್ತರಿಸಿದ ಸುರೇಶ್ ಕುಮಾರ್

Updated on: Oct 30, 2025 | 10:40 PM

ಬೆಂಗಳೂರಿನ ಟನಲ್ ರೋಡ್ ವಿಚಾರ ಈಗ ಸಂಸದ ಮತ್ತು ಡಿಸಿಎಂ ನಡುವಿನ ಮೇಲಾಟಕ್ಕೆ ತಿರುಗಿದೆ. ತೇಜಸ್ವಿ ಸೂರ್ಯ ಕೊಟ್ಟಿದ್ದ ಪ್ರಸ್ತಾವನೆಯನ್ನು ಪರ್ಯಾಯವಲ್ಲ ಎಂದು ಒಂದೇ ಸಾಲಿನ ಉತ್ತರದಲ್ಲಿ ಡಿ.ಕೆ. ಶಿವಕುಮಾರ್ ಪಕ್ಕಕ್ಕಿಟ್ಟಂತಿದೆ. ಇದೇ ವಿಚಾರ ಮತ್ತೆ ಇಬ್ಬರ ನಡುವೆ ಸಮರ ಸಾರುವಂತೆ ಮಾಡಿದ್ದು, ಸುರಂಗ ಮಾರ್ಗದ ಸುತ್ತಲಿನ ಚರ್ಚೆಗಳು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.ಟ್ರಾಫಿಕ್​​ಗೆ ಟನಲ್ ರೋಡ್ ಅಷ್ಟೇ ಪರಿಹಾರ ಎನ್ನುವುದು ಡಿಸಿಎಂ ಡಿಕೆ ಶಿವಕುಮಾರ್ ಬಲವಾದ ವಾದ. ಆದ್ರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯರದ್ದು ಇದಕ್ಕೆ ತದ್ವಿರುದ್ಧ ಪ್ರತಿವಾದ.

ಬೆಂಗಳೂರು, (ಅಕ್ಟೋಬರ್ 30): ಬೆಂಗಳೂರಿನ ಟನಲ್ ರೋಡ್ ವಿಚಾರ ಈಗ ಸಂಸದ ಮತ್ತು ಡಿಸಿಎಂ ನಡುವಿನ ಮೇಲಾಟಕ್ಕೆ ತಿರುಗಿದೆ. ತೇಜಸ್ವಿ ಸೂರ್ಯ ಕೊಟ್ಟಿದ್ದ ಪ್ರಸ್ತಾವನೆಯನ್ನು ಪರ್ಯಾಯವಲ್ಲ ಎಂದು ಒಂದೇ ಸಾಲಿನ ಉತ್ತರದಲ್ಲಿ ಡಿ.ಕೆ. ಶಿವಕುಮಾರ್ ಪಕ್ಕಕ್ಕಿಟ್ಟಂತಿದೆ. ಇದೇ ವಿಚಾರ ಮತ್ತೆ ಇಬ್ಬರ ನಡುವೆ ಸಮರ ಸಾರುವಂತೆ ಮಾಡಿದ್ದು, ಸುರಂಗ ಮಾರ್ಗದ ಸುತ್ತಲಿನ ಚರ್ಚೆಗಳು ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ.ಟ್ರಾಫಿಕ್​​ಗೆ ಟನಲ್ ರೋಡ್ ಅಷ್ಟೇ ಪರಿಹಾರ ಎನ್ನುವುದು ಡಿಸಿಎಂ ಡಿಕೆ ಶಿವಕುಮಾರ್ ಬಲವಾದ ವಾದ. ಆದ್ರೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯರದ್ದು ಇದಕ್ಕೆ ತದ್ವಿರುದ್ಧ ಪ್ರತಿವಾದ.

ಈ ಟನಲ್ ರೋಡ್ ವಿಚಾರ ಇಬ್ಬರು ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳ ಸುರಿಮಳೆಗೈಯುವಂತೆ ಮಾಡಿದೆ. ತೇಜಸ್ವಿ ಸೂರ್ಯ ಏನು ಎಕ್​ಸಪರ್ಟ್ ಅಲ್ಲ. ಬಿಜೆಪಿ ಸರ್ಕಾರವಿದ್ದಾಗ ಏನು ಮಾಡಿದ್ರು? ಬೆಂಗಳೂರಿಗೆ ಅವರ ಕೊಡುಗೆ ಏನು ಎಂದು ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಇದು ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಈ ಸಂಬಂಧ ರಾಜಾಜಿನಗರ ಬಿಜೆಪಿ ಶಾಸಕ ಎಸ್ ಸುರೇಶ್ ಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಡಿಕೆ ಶಿವಕುಮಾರ್ ಅವರ ಒಂದೊಂದು ಪ್ರಶ್ನೆಗೆ ಉತ್ತರಿಸಿದ್ದು, ಬೆಂಗಳೂರಿಗೆ ಬಿಜೆಪಿ ಏನೆಲ್ಲಾ ಕೊಡುಗೆ ನೀಡಿದೆ ಎನ್ನುವ ಬಗ್ಗೆ ಎಳೆ ಎಳೆಯಾಗಿಬಿಟ್ಟಿದ್ದಾರೆ.

Loading...
Unable to load recommendations.
Follow Us