ಬೆಂಗಳೂರು: 18 ಶಾಸಕರನ್ನು ಸ್ಪೀಕರ್ ಖಾದರ್ ಸಸ್ಪೆಂಡ್ ಮಾಡಿದ್ದನ್ನು ವಿರೋಧಿಸಿ ಬಿಜೆಪಿ ನಾಯಕರ ಪ್ರತಿಭಟನೆ

ಅರುಣ್​ ಕುಮಾರ್​ ಬೆಳ್ಳಿ

Updated on: Apr 02, 2025 | 12:50 PM

ಅಧಿವೇಶನ ಇಲ್ಲದ ಸಮಯದಲ್ಲಿ ಖಾದರ್ ಅವರು ತಮ್ಮ ಬಂಧುಗಳನ್ನು, ಸಂಬಂಧಿಕರನ್ನು ಮತ್ತು ಮೌಲ್ವಿಗಳನ್ನು ಸದನಕ್ಕೆ ಕರೆತಂದು ಸ್ಪೀಕರ್ ಪೀಠದ ಮುಂದೆ, ಹಿಂದೆ ಸುತ್ತಮುತ್ತ ಕೂರಿಸಿ ಫೋಟೋ ತೆಗೆಸಿಕೊಳ್ಳುತ್ತಾರೆ, ಅದು ಕಾನೂನುಸಮ್ಮತ ಅಂತ ಅಂದುಕೊಳ್ಳೋದಾದರೆ, ಜನರಿಂದ ಆಯ್ಕೆಯಾಗಿ ಸಂವಿಧಾನದ ಮೇಲೆ ಪ್ರಮಾಣವಚನ ಸ್ವೀಕರಿಸುವ ಶಾಸಕರು ಪೀಠದ ಬಳಿ ಹೋದರೆ ಹೇಗೆ ಕಾನೂನುಬಾಹಿರ ಎಂದು ಅಶೋಕ ಪ್ರಶ್ನಿಸಿದರು.

ಬೆಂಗಳೂರು, ಏಪ್ರಿಲ್ 2: ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಇಂದು ವಿಧಾನ ಸೌಧದ ಆವರಣದಲ್ಲಿರುವ ಕೆಂಗಲ್ ಹನುಮಂತಯ್ಯನವರ ಪ್ರತಿಮೆ ಬಳಿ ನಿಂತು ಅಧಿವೇಶನ ನಡೆಯುತ್ತಿದ್ದಾಗ 18 ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿರುವ ಸ್ಪೀಕರ್ ಯುಟಿ ಖಾದರ್ ವಿರುದ್ಧ ಪ್ರತಿಭಟನೆ ನಡೆಸಿದರು. ಸ್ಪೀಕರ್ ಹುದ್ದೆ ಧರ್ಮಾತೀತ ಮತ್ತು ಪಕ್ಷಾತೀತವಾದದ್ದು ಆದರೆ ಖಾದರ್ ಸರ್ಕಾರದ ಏಜೆಂಟ್ ನಂತೆ ವರ್ತಿಸಿದ್ದಾರೆ, ಮುಸ್ಲಿಂ ಮೀಸಲಾತಿ ವಿಧೇಯಕವನ್ನು ಪಾಸು ಮಾಡಬೇಕಿತ್ತು, ಅದೇ ಕಾರಣಕ್ಕೆ ಅವರು ಸಂವಿಧಾನಬಾಹಿರವಾಗಿ ಬಿಜೆಪಿ ಶಾಸಕರನ್ನು ಸಸ್ಪೆಂಡ್ ಮಾಡಿದ್ದಾರೆ ಎಂದು ವಿರೋಧ ಪಕ್ಷ ದ ನಾಯಕ ಆರ್ ಅಶೋಕ ಹೇಳಿದರು.

ಇದನ್ನೂ ಓದಿ:  Karnataka Budget Session: ಸ್ಪೀಕರ್ ಯುಟಿ ಖಾದರ್ ಮತ್ತು ಶಾಸಕ ಸುನೀಲ ಕುಮಾರ ತುಳು ಭಾಷೆಯಲ್ಲಿ ಮಾತಾಡಿದಾಗ ಸದನ ಕಕ್ಕಾಬಿಕ್ಕಿ!

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.